News Karnataka Kannada
Friday, May 03 2024
ಕ್ಯಾಂಪಸ್

ನೆಲ್ಲಿಕಟ್ಟೆ ಅಂಬಿಕಾ ಪಿಯು ಕಾಲೇಜಿನಲ್ಲಿ ನಟ್ಟೋಜ ಶಿವಾನಂದ ರಾವ್ ಅವರಿಗೆ ನುಡಿ ನಮನ

ನಟ್ಟೋಜ ಶಿವಾನಂದ ರಾವ್ ಅವರು ಹಿಂದೂ ಸಮಾಜಕ್ಕಾಗಿ ಅಹರ್ನಿಶಿಯಾಗಿ ದುಡಿದು, ತಮ್ಮನ್ನು ತಾವು ಸಮರ್ಪಿಸಿಕೊಂಡರು. ಅವರ ಅಗಲುವಿಕೆ ಅತೀವ ದುಃಖ ತಂದಿದೆ. ಅವರ ನಡೆ-ನುಡಿ ಸಂಸ್ಕಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ನಾವು ಅರ್ಪಿಸುವ ನಿಜವಾದ ಗೌರವ ಎಂದು ಖ್ಯಾತವಾಗ್ಮಿ, ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು.
Photo Credit : News Kannada

ಪುತ್ತೂರು: ನಟ್ಟೋಜ ಶಿವಾನಂದ ರಾವ್ ಅವರು ಹಿಂದೂ ಸಮಾಜಕ್ಕಾಗಿ ಅಹರ್ನಿಶಿಯಾಗಿ ದುಡಿದು, ತಮ್ಮನ್ನು ತಾವು ಸಮರ್ಪಿಸಿಕೊಂಡರು. ಅವರ ಅಗಲುವಿಕೆ ಅತೀವ ದುಃಖ ತಂದಿದೆ. ಅವರ ನಡೆ-ನುಡಿ ಸಂಸ್ಕಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ನಾವು ಅರ್ಪಿಸುವ ನಿಜವಾದ ಗೌರವ ಎಂದು ಖ್ಯಾತವಾಗ್ಮಿ, ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು.

ಅವರು ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ನಟ್ಟೋಜ ಶಿವಾನಂದ ರವ್ ಅವರಿಗೆ ಹಮ್ಮಿಕೊಳ್ಳಲಾದ ನುಡಿ ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಭಾರತೀಯರು ಕಾತರದಿಂದ ಕಾಯುತ್ತಿದ್ದ ಶ್ರೀರಾಮಮಂದಿರ ನಿರ್ಮಾಣಕ್ಕೆ ೧೯೮೯, ೧೯೯೨ರಲ್ಲಿಯೇ ಪುತ್ತೂರಿನ ತಂಡದಲ್ಲಿ ಕರ ಸೇವಕರಾಗಿ ಭಾಗವಹಿಸಿದ್ದರು. ಮಂದಿರಕ್ಕಾಗಿ ಹೋರಾಡಿ ೧೪ ದಿನಗಳ ಜೈಲುವಾಸವನ್ನೂ ಅನುಭವಿಸಿದ್ದರು, ಜೊತೆಗೆ ಅದೇ ಭವ್ಯ ಮಂದಿರ ಲೋಕಾರ್ಪಣೆ ಸಂದರ್ಭವನ್ನೂ ನೋಡಿ ಸಂತಸಗೊಂಡಿದ್ದು ಸ್ಮರಣೀಯ ವಿಚಾರ ಎಂದು ಅವರ ಸಾಧನೆಯ ಹಾದಿಯನ್ನು ಸ್ಮರಿಸಿಕೊಂಡರು.

ವಿದ್ಯಾರ್ಥಿಗಳು, ಉಪನ್ಯಾಸಕರು ನಟ್ಟೋಜ ಶಿವಾನಂದ ರಾವ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಉಪಸ್ಥಿತರಿದ್ದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಅಕ್ಷತಾ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು