News Karnataka Kannada
Friday, May 03 2024
ಬೀದರ್

ಪ್ರಾಥಮಿಕ, ಪ್ರೌಢಶಾಲೆಗಳು ಆರಂಭ: ಹೂ ನೀಡಿ ಮಕ್ಕಳನ್ನು ಬರಮಾಡಿಕೊಂಡ ಶಿಕ್ಷಕರು

Primary and secondary schools to reopen: Teachers welcome children with flowers
Photo Credit : News Kannada

ಖಟಕಚಿಂಚೋಳಿ: ಹೋಬಳಿಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭಗೊಂಡಿವೆ. ಶಾಲೆಗೆ ಆಗಮಿಸಿದ ಮಕ್ಕಳನ್ನು ಶಿಕ್ಷಕರು ಸಂಭ್ರಮದಿಂದ ಬರಮಾಡಿಕೊಂಡರು.

ಇಲ್ಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಹೂ ಗುಚ್ಛ, ಸಿಹಿ ತಿನ್ನಿಸಿ ಸ್ವಾಗತಿಸಿದರು. ಅಲ್ಲದೆ, ಶಾಲೆಯ ಮುಖ್ಯ ದ್ವಾರವನ್ನು ಮಾವಿನ ತಳಿರು-ತೋರಣಗಳಿಂದ ಅಲಂಕರಿಸಲಾಗಿತ್ತು. ಅಲ್ಲಲ್ಲಿ ರಂಗೋಲಿ ಬಿಡಿಸಲಾಗಿತ್ತು. ಮಧ್ಯದಲ್ಲಿ ಬಲೂನ್ ಅಳವಡಿಸಲಾಗಿತ್ತು. ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು.

ಮುಖ್ಯ ಶಿಕ್ಷಕ ರಾಜಕುಮಾರ ಜೋಳದಾಪಕೆ ಮಾತನಾಡಿ,’ಸರ್ಕಾರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದರೊಂದಿಗೆ ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಬೂಟ್, ಷೂ ಸೇರಿದಂತೆ ಪಠ್ಯಪುಸ್ತಕ ಉಚಿತವಾಗಿ ವಿತರಿಸುತ್ತಿದೆ. ಆದ್ದರಿಂದ ಪಾಲಕರು ಖಾಸಗಿ ಶಾಲೆಯ ವ್ಯಾಮೋಹಕ್ಕೆ ಒಳಗಾಗದೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು’ ಎಂದು ಮನವಿ ಮಾಡಿದರು.

ಶಿಕ್ಷಕರಾದ ಚಾಂದಪಾಷಾ, ಅವಿನಾಶ, ಅನುಸೂಯಾ, ಜಯಲಕ್ಷ್ಮೀ, ಶಿಲ್ಪಾ ಗೌಡರ್, ದೈಹಿಕ ಶಿಕ್ಷಣ ಶಿಕ್ಷಕ ದೇವಿದಾಸ ಮೇತ್ರೆ ಹಾಗೂ ಮೋಯಿಜ್ ಇದ್ದರು.

ಮಾಸಿಮಾಡ: ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಹಾಗೂ ಎಸ್‌ಡಿಎಂಸಿ ಸದಸ್ಯರು ಮಕ್ಕಳಿಗೆ ಹೂ ನೀಡಿ ಬರಮಾಡಿಕೊಂಡರು.

ಮುಖಂಡರಾದ ಬಾಬುರಾವ್ ಬಿರಾದಾರ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸಿದರು. ಖಟಕಚಿಂಚೋಳಿ ಗ್ರಾಮದ ಪ್ರೌಢಶಾಲೆಯಲ್ಲಿ ಸಮವಸ್ತ್ರ ನೀಡುವ ಮೂಲಕ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು. ಮುಖ್ಯ ಶಿಕ್ಷಕ ಮುನೀರೊದ್ದಿನ್ ಸೇರಿದಂತೆ ಶಿಕ್ಷಕರು ಇದ್ದರು.

ಇದೇ ರೀತಿ ಹೋಬಳಿಯ ಮದಕಟ್ಟಿ, ಚಳಕಾಪುರ, ದಾಡಗಿ ಸೇರಿ ಎಲ್ಲ ಶಾಲೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು