ಮಂಗಳೂರು: 4 ವರ್ಷಗಳಿಗೊಮ್ಮೆ ನಡೆಯುವಂತಹ ಅಂತರಾಷ್ಟ್ರೀಯ ಮಟ್ಟದ 25ನೇ ವಿಶ್ವಜಾಂಬೂರಿಯು ಸೌತ್ಕೊರಿಯಾದಲ್ಲಿ ದಿನಾಂಕ 01.08.2023 ರಿಂದ 12.08.2023 ರವರೆಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲೆಯಿಂದ ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ಒಟ್ಟು 58 ವಿದ್ಯಾರ್ಥಿಗಳು ದಳನಾಯಕರುಗಳಲ್ಲಿ ಶಕ್ತಿ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿನಿಯಾದ ಆದ್ಯ ಸುಲೋಚನ ಮುಳಿಯ ಆಯ್ಕೆಯಾಗಿ ಅಲ್ಲಿಗೆ ತೆರಳುತ್ತಿದ್ದಾರೆ.
ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಯ್ಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಯ್ಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಭಾರ ಪ್ರಾಂಶುಪಾಲೆಯಾದ ದಿವ್ಯಜ್ಯೋತಿ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.