News Karnataka Kannada
Friday, May 17 2024
ಕ್ಯಾಂಪಸ್

ಪುತ್ತೂರು: ಶ್ರೀ ಶಂಕರ ಸಭಾಭವನದ ನಾಮಫಲಕ ಶೃಂಗೇರಿ ಶ್ರೀಗಳಿಂದ ಅನಾವರಣ

Puttur: Sringeri Seer unveils the plaque of Sri Shankara Sabha Bhavan
Photo Credit : News Kannada

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಶಂಕರ ಸಭಾಭವನದ ನಾಮಫಲಕವನ್ನು ಶೃಂಗೇರಿಯಲ್ಲಿ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಆಶಿರ್ವಾದಗಳೊಂದಿಗೆ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳು ಸೋಮವಾರ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಸದಸ್ಯ ಬಾಲಕೃಷ್ಣ ಬೋರ್ಕರ್, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯ ಪ್ರಾಂಶುಪಾಲೆ ಮಾಲತಿ ಭಟ್ ಡಿ, ರಕ್ಷಕಿ ಶಿಕ್ಷಕ ಸಂಘದ ಅಧ್ಯಕ್ಷೆ ಸೀಮಾ ನಾಗರಾಜ್, ಮಠದ ಹಿರಿಯರು ಉಪಸ್ಥಿತರಿದ್ದರು.

ನೂತನವಾಗಿ ತಯಾರಾಗಿರುವ ಶ್ರೀ ಶಂಕರ ಸಭಾಭವನ ಸುಮಾರು ಎರಡು ಸಾವಿರ ಮಂದಿ ಕುಳಿತುಕೊಳ್ಳುವಷ್ಟು ವಿಶಾಲವಾಗಿದೆ. ಹಾಗೆಯೇ ಈ ಸಭಾಭವನದಲ್ಲಿ ಶ್ರೀ ಲಲಿತಾಂಬಿಕಾ ವೇದಿಕೆ ಕೂಡ ನಿರ್ಮಾಣಗೊಂಡಿದ್ದು ಬೃಹತ್ ಕಾರ್ಯಕ್ರಮ ಆಯೋಜನೆಗೆ ಸಹಕಾರಿಯೆನಿಸಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು