ಪುತ್ತೂರು: ಅಂಬಿಕಾ ವಿದ್ಯಾಲಯ(ಸಿಬಿಎಸ್ಸಿ) ಇದರ ವತಿಯಿಂದ ಪ್ರೌಢಶಾಲಾ ಮಕ್ಕಳಿಗಾಗಿ ಎನ್ಟಿಎಸ್ಇ, ಜೆಇಇ ಹಾಗೂ ನೀಟ್ ಫೌಂಡೇಶನ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನೆರವೇರಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಬೋರ್ಕರ್ ತರಗತಿಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಫೌಂಡೇಶನ್ ತರಗತಿಗಳ ಪ್ರಯೋಜವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಮಣ್ಯ ನಟ್ಟೋಜ ಮಾತನಾಡಿ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಿ ಮನಸ್ಥಿತಿಯನ್ನು ಒಗ್ಗೂಡಿಸಬೇಕು. ಪಠ್ಯದಲ್ಲಿ ಬರುವ ಪ್ರತಿಯೊಂದು ಅನುಮಾನಗಳನ್ನು ಶಿಕ್ಷಕರಲ್ಲಿ ಕೇಳಿ ಬಗೆಹರಿಸಿಕೊಳ್ಳಬೇಕು. ಪೆÇೀಷಕರು ಮಕ್ಕಳನ್ನು ಇಂತಹ ತರಗತಿಗಳಿಗೆ ನೊಂದಾಯಿಸಿಕೊಳ್ಳುವಲ್ಲಿ ಪೆÇ್ರೀತ್ಸಾಹಿಸಬೇಕು ಎಂದು ಕರೆ ನೀಡಿದರು. ಅಂತೆಯೇ ಎನ್ಟಿಎಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಂಬಿಕಾದಲ್ಲಿ ಪಿಯುಸಿ ಇಂದ ಪದವಿಯ ತನಕ ಉಚಿತ ಶಿಕ್ಷಣ ನೀಡಲಾಗುವುದು ಎಂದು ಘೋಷಿಸಿದರು.
ಫೌಂಡೇಶನ್ ತರಗತಿಗಳ ಕುರಿತಾಗಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ಮಾಹಿತಿ ರಾಜಶ್ರೀ ಎಸ್ ನಟ್ಟೋಜ ಮಾಹಿತಿ ನೀಡಿದರು. ಫೌಂಡೇಶನ್ ತರಗತಿಗಳ ಸಂಯೋಜಕ ಅಭಿಷೇಕ್ ಎನ್ ಉಪಸ್ಥಿತರಿದ್ದು ಕಾರ್ಯಕ್ರಮ ನಿರ್ವಹಿಸಿದರು.