News Karnataka Kannada
Friday, May 03 2024
ಕ್ಯಾಂಪಸ್

‘ವಿಚಾರ ಸಂಕಿರಣಗಳಿಂದ ವೈಚಾರಿಕ ವಿವೇಚನೆ’

'Rational discernment from seminars'
Photo Credit : News Kannada

ಉಜಿರೆ: ಸ್ನಾತಕೋತ್ತರ ವ್ಯಾಸಂಗ ನಿರತರಾಗಿದ್ದಾಗಲೇ ಆಯೋಜಿಸಲಾಗುವ ವಿವಿಧ ವಿಚಾರ ಸಂಕಿರಣ ಕಾರ್ಯಕ್ರಮಗಳಿಂದ ಸ್ಪೂರ್ತಿದಾಯಕ ವೈಚಾರಿಕ ವಿವೇಚನೆಯನ್ನು ಪಡೆಯಬೇಕು ಎಸ್. ಡಿ. ಎಂ ಕಾಲೇಜಿನ ಆಡಳಿತಾತ್ಮಕ ಕುಲಸಚಿವರಾದ ಡಾ. ಶಲಿಪ್ ಎ. ಪಿ ಅಭಿಪ್ರಾಯಪಟ್ಟರು.

ಉಜಿರೆಯ ಎಸ್. ಡಿ. ಎಂ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ‘ಸಿನರ್ಜಿ’ಯ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸಮಾಜ ಕಾರ್ಯ ವಿಭಾಗ ತುಂಬಾ ಸಾಂಸ್ಕೃತಿಕವಾಗಿದೆ. ವ್ಯಕ್ತಿತ್ವ ವಿಕಸನ, ವಿಮರ್ಶಾತ್ಮಕ ಚಿಂತನೆ, ಸೃಜನಶೀಲತೆ, ಮತ್ತು ನಾಯಕತ್ವ ಗುಣಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ವಿಚಾರ ಸಂಕಿರಣಗಳು ನೆರವಾಗುತ್ತವೆ. ಇವುಗಳಿಂದ ಸಮಾಜದ ಪರಿವರ್ತನೆಯ ವಿವರಗಳನ್ನು ಅರಿತುಕೊಳ್ಳಬಹುದು ಎಂದು ಹೇಳಿದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಜನರನ್ನು ಭೇಡಿಯಾಗಬೇಕು. ಸಮುದಾಯಗಳ ಬೆಳವಣಿಗೆಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು.ಅದಕ್ಕೆ ಬೇಕಾದ ಸಂಸ್ಥೆಗಳನ್ನು ಸ್ಥಾಪಿಸಬೇಕು ಎಂದು ಎಸ್. ಡಿ. ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ. ರವಿಶಂಕರ್ ಕೆ. ಆರ್, ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಬಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದ್ವಿತೀಯ ಸಮಾಜ ಕಾರ್ಯ ವಿದ್ಯಾರ್ಥಿ ಅಮೃತ್ ನಿರೂಪಿಸಿದರು. ಅನುಷಾ ಸ್ವಾಗತಿಸಿ, ಜಸ್ವಿನ್ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು