ಬಸವಕಲ್ಯಾಣ: ನೀಲಾಂಬಿಕಾ ಕಾಲೇಜಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು 50 ಲಕ್ಷ ಅನುದಾನ ಒದಗಿಸಲಾಗುವುದು’ ಎಂದು ಶಾಸಕ ಶರಣು ಸಲಗರ ಭರವಸೆ ನೀಡಿದರು.
ನಗರದ ನೀಲಾಂಬಿಕಾ ಸರ್ಕಾರಿ ಕಾಲೇಜಿನಲ್ಲಿ ಶನಿವಾರ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿ, ‘ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ 50 ಕೋಟಿ ಅನುದಾನವಿದ್ದು, 15 ದಿನದಲ್ಲಿ ಮಂಜೂರುಗೊಳಿಸಲಾಗುವುದು. ಈಗಾಗಲೇ ಕಾಲೇಜಿನ ಗ್ರಂಥಾಲಯಕ್ಕಾಗಿ 3.75 ಲಕ್ಷ ಅನುದಾನ ನೀಡಿದ್ದೇನೆ’ ಎಂದು ಹೇಳಿದರು.
‘ಬರೆಯುವುದಕ್ಕೆ ಐವತ್ತು ಪೈಸೆಯ ಪೆನ್ನಿನ ನಳಿ ಸಿಗದಂಥ ಕಾಲವಿತ್ತು. ಈಗ ತಂದೆ-ತಾಯಿ ಮಕ್ಕಳಿಗೆ ಸಾವಿರಾರು ರೂಪಾಯಿಯ ಸ್ಮಾರ್ಟ್ಫೋನ್ ಕೊಡುತ್ತಿದ್ದಾರೆ. ಆದ್ದರಿಂದ ಶ್ರಮವಹಿಸಿ ಓದಿ, ಉತ್ತಮ ಫಲಿತಾಂಶ ತರಬೇಕು. ಐಎಎಸ್ ಅಧಿಕಾರಿ ಆಗಬೇಕು’ ಎಂದರು.
ಪ್ರಾಚಾರ್ಯ ಸುರೇಶ ಅಕ್ಕಣ್ಣ, ಉಪನ್ಯಾಸಕ ನರಸಿಂಗರೆಡ್ಡಿ ಗದ್ಲೇಗಾಂವ, ಅಶೋಕರೆಡ್ಡಿ, ಸವಿತಾ ಶಿವಾನಂದ, ಮಹಾಲೇಶ ಮಾತನಾಡಿದರು. ದೀಪಕ ಗಾಯಕವಾಡ, ಜ್ಞಾನೇಶ್ವರ ಮುಳೆ, ಉಪನ್ಯಾಸಕತಾದ ಸುರೇಶ ಮೋರೆ, ನಜೀಮುದ್ದೀನ್, ವಿಷ್ಣು ಜಮಾದಾರ, ಲತಾ ಕಟಕೆ, ರಾಜಕುಮಾರ ಕಳಮಾಸೆ, ಶಿವಕುಮಾರ ಜಡಗೆ, ಮಾಣಿಕರೆಡ್ಡಿ, ಅಶ್ವಿನಕುಮಾರ ಗೋರ್ಟೆ, ಬಸವರಾಜ ಇದ್ದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ. ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…
ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್ ಸ್ಲಾಯ್ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್ನಲ್ಲಿ ಅವರು…
ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಎಂದು…
ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…