News Karnataka Kannada
Sunday, May 05 2024
ಕ್ಯಾಂಪಸ್

ಸಾಣೂರು: ಪ್ರಕೃತಿ ವಿದ್ಯಾ ಸಂಸ್ಥೆಯಲ್ಲಿ ‘ಪ್ರಕೃತಿ ಐಕ್ಯಂ’ ಮತ್ತು ಸಲಹಾ ಸಮಿತಿ ಉದ್ಘಾಟನೆ

Sanoor: 'Prakriti Aikyam' and advisory committee inaugurated at Prakriti Vidya Sansthan
Photo Credit : News Kannada

ಸಾಣೂರು: ಅಕ್ಟೋಬರ್ 15 ರಂದು ಪ್ರಕೃತಿ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಸಲಹಾ ಸಮಿತಿ ಉದ್ಘಾಟನಾ ಕಾರ್ಯಕ್ರಮ ಹಾಗೂ ‘ಪ್ರಕೃತಿ ಐಕ್ಯಂ’ ಎನ್ನುವ ಹೆಸರಿನ ಅಡಿಯಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಲಹಾ ಸಮಿತಿಯ ಸದಸ್ಯರಾಗಿ ಡಾ. ಜಯಶ್ರೀ ( ಶ್ರೀನಿವಾಸ ಕಾಲೇಜು ಮಂಗಳೂರು), ಡಾ. ರಾಖಿ ಮಥಾಯ್ ಆಂಟೋನಿ (ಲೀಡ್ ಮಾಸ್ಟರ್ ಅಕಾಡೆಮಿಕ್ ವಲೀಡ್ಟರ್ ಬೆಂಗಳೂರು), ಡಾ. ನಂದಿನಿ ( ಹೆಡ್ ಆಫ್ ದಿ ಡಿಪಾರ್ಟ್ ಮೆಂಟ್ ಜೊವಾಲಜಿ , ಗೋವಾ), ರಘು ಟಿ. ವೈ, ( ಶ್ರೀ ಸತ್ಯ ಸಾಯಿ ಪ್ರೌಢ ಶಾಲೆ ಅಳಿಕೆ), ನಾಗೇಶ್ ಶೆಟ್ಟಿ ಬಿ. ( ವಕೀಲರು, ಮೂಡಬಿದ್ರೆ), ಕರುಣಾಕರ್ ಎಸ್. ಕೋಟ್ಯಾನ್ ( ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸಾಣೂರ್), ಗೋಕುಲ ಎಂ .ವಿ. ಪಾಟ್ನರ್ ಆಫ್ ಫೈನಾನ್ಸ್ ವಿ ಅಂಡ್ ಟ್ಯಾಕ್ಸ್ ಕನ್ಸಲ್ಟ್ ಬೆಂಗಳೂರು ) ಇವರೆಲ್ಲನ್ನು ಪ್ರಕೃತಿ ವಿದ್ಯಾ ಸಂಸ್ಥೆ ಅಧ್ಯಕ್ಷ ರಾದ ಕ್ರಿಸ್ಪಿನ್ ಜೆರಾಲ್ಡ್ ಕ್ರಾಸ್ಟ್ ರವರು ಪದಗ್ರಹಣ ಮಾಡಿ, ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಅಶೋಕ್ ಕುಮಾರ್ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪದ್ಮನಾಭ ಗೌಡರವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸಲಹಾ ಸಮಿತಿಯ ಎಲ್ಲಾ ಸದಸ್ಯರು ತಮ್ಮ ಅನಿಸಿಕೆ , ಅಭಿಪ್ರಾಯಗಳನ್ನು ಕಾರ್ಯಕ್ರಮದಲ್ಲಿ ಹಚ್ಚಿಕೊಂಡರು ಹಾಗೂ ಹಳೆ ವಿದ್ಯಾರ್ಥಿಗಳು ಸಂಸ್ಥೆಯ ಅಧ್ಯಕ್ಷರ ಬಗ್ಗೆ ಮೆಚ್ಚುಗೆಯನ್ನೂ ಹಾಗೂ ತಮ್ಮ ವಿದ್ಯಾರ್ಥಿ ಜೀವನದ ಸುಂದರ ಕ್ಷಣಗಳನ್ನು ಮೆಲುಕು ಹಾಕಿದರು.

ಪ್ರಕೃತಿ ವಿದ್ಯಾಸಂಸ್ಥೆಯ ಪ್ರೌಢಶಾಲೆಯ ಪ್ರಾಂಶುಪಾಲರಾದ  ಪ್ರಸಾದ್ ರವರು ಕಾರ್ಯಕ್ರಮವನ್ನು ನಿರೂಪಿಸಿ, ಆಡಿಳಿತಾಧಿಕಾರಿ ಮಮತ ಶರ್ಮ ರವರು ಎಲ್ಲರನ್ನು ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲೆಯಾದ  ವಿನ್ಯಾರವರು ಎಲ್ಲರಿಗೂ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು