ಮಂಗಳೂರು, ಮೇ.29: ಬೆಂಗಳೂರಿನಲ್ಲಿ ನಡೆದ ಡಾ.ಬಿ ಆರ್ ಅಂಬೇಡ್ಕರ್ ಕರ್ನಾಟಕ ರಾಜ್ಯ ಮಟ್ಟದ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ 75ಕೆ.ಜಿ ವಿಭಾಗದಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಶಾರ್ವಿ ಶೆಟ್ಟಿಯವರು ಚಿನ್ನದ ಪದಕವನ್ನು ಪಡೆದಿರುತ್ತಾರೆ.
ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಯ್ಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಯ್ಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.