ಶಿವಮೊಗ್ಗ: ಕರ್ನಾಟಕ ರಾಜ್ಯ ರಾಷ್ಟ್ರೀಯ ಸೇವಾ ಯೋಜನೆಯು 2020-21ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಇದರಲ್ಲಿ ಅತ್ಯುತ್ತಮ ರಾಷ್ಟ್ರೀಯ ಸೇವಾಯೋಜನೆಯ ಸ್ವಯಂ ಸೇವಕಿ ಪ್ರಶಸ್ತಿಗೆ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿನಿಯಾದ ಕು. ರಕ್ಷಿತಾ ಸಿ.ಡಿ.ರವರು ಆಯ್ಕೆಯಾಗಿರುತ್ತಾರೆ.
ದಿನಾಂಕ 10.09.2022 ರಂದು ರಾಜ್ಯ ಸರ್ಕಾರವು ರಾಜಭವನದಲ್ಲಿ ಆಯೋಜಿಸಿರುವ ಪ್ರಶಸ್ತಿಪ್ರಧಾನ ಸಮಾರಂಭದಲ್ಲಿ ಈ ವಿದ್ಯಾರ್ಥಿನಿಯು ಪ್ರಾಂಶುಪಾಲರು ಹಾಗು ಎನ್ಎಸ್ಎಸ್ ಅಧಿಕಾರಿಗಳಾದ ಡಾ. ಸುಕೀರ್ತಿಯವರೊಂದಿಗೆ ತೆರಳಿ ರಾಜ್ಯಮಟ್ಟದ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಪ್ರಾಂಶುಪಾಲರು ತಿಳಿಸಿದರು.
ಮಾನಸ ಟ್ರಸ್ಟ್ನ ಡಾ. ರಜನಿ ಎ. ಪೈ, ಡಾ. ಪ್ರೀತಿ ಶಾನ್ಭಾಗ್, ಡಾ. ವಾಮನ್ ಶಾನ್ಭಾಗ್, ಡಾ. ರಾಜೇಂದ್ರ ಚೆನ್ನಿ, ಪ್ರಾಂಶುಪಾಲೆ ಡಾ. ಸಂಧ್ಯಾಕಾವೇರಿ, ಕಾಲೇಜಿನ ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವರ್ಗ ಈ ವಿದ್ಯಾರ್ಥಿನಿಗೆ ಅಭಿನಂದನೆಯನ್ನು ಸಲ್ಲಿಸುತ್ತಿದ್ದಾರೆ.