News Karnataka Kannada
Monday, May 13 2024
ಕ್ಯಾಂಪಸ್

ಪುತ್ತೂರು: ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕೋತ್ಸವ

Sitaraghava PU College Academic Day
Photo Credit : By Author

ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜಿನಲ್ಲಿ ಜ. 6ರಂದು ಶೈಕ್ಷಣಿಕೋತ್ಸವ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ರಾಷ್ಟ್ರೀಯ ಶಿಕ್ಷಣ ನೀತಿಯಡಿ ಶಾಲೆಗಳಲ್ಲಿ ಮಹತ್ತರವಾದ ಬದಲಾವಣೆಗಳು ನಡೆಯುತ್ತಿವೆ. ಪ್ರಧಾನಮಂತ್ರಿಯವರು ಶೈಕ್ಷಣಿಕ ಚಟುವಟಿಕೆಗಾಗಿ ಸುಮಾರು 5 ಕೋಟಿ ರೂ. ಅನುದಾನ ನೀಡಿದ್ದು, ಎಲ್ಲಾ ಶಾಲೆಗಳಿಗೂ ಹೊಸ ಮೆರುಗು ಬರಲಿದೆ ಎಂದ ಅವರು, ದೇವಾಲಯಗಳು ಸಂಸ್ಕೃತಿಯನ್ನು ಕಲಿಸಿದರೆ, ಶಾಲೆಗಳು ಜ್ಞಾನವನ್ನು ಕಲಿಸುವ ಕೆಲಸವನ್ನು ಮಾಡುತ್ತಿವೆ ಎಂದರು.

ಕಳೆದ 57 ವರ್ಷಗಳಿಂದ ವಿದ್ಯಾಭ್ಯಾಸ ನೀಡವು ಕಾಯಕದಲ್ಲಿ ಸೀತಾರಾಘವ ಪದವಿಪೂರ್ವ ಕಾಲೇಜು ತೊಡಗಿಸಿಕೊಂಡಿದೆ. ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುವ ಮೂಲಕ ಇತಿಹಾಸವನ್ನು ನಿರ್ಮಿಸಿದೆ ಎಂದರು.

ನಿವೃತ ಶಿಕ್ಷಕರಾದ ಶ್ರೀ ಕೃಷ್ಣ ಪಿ., ನಾರಾಯಣಿ ಎಸ್., ಗೋಪಾಲಕೃಷ್ಣ ಕೆ.ಆರ್., ಚಂದ್ರಮುಖಿ ಎ., ಚಿತ್ರವತಿ ಅವರನ್ನು ಸನ್ಮಾನಿಸಲಾಯಿತು. ಪದವಿಪೂರ್ವ ಕಾಲೇಜಿಗೆ ಅನುದಾನ ನೀಡಿದ ಶಾಸಕ ಸಂಜೀವ ಮಠಂದೂರು ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.

ಮುಳ್ಳೇರಿಯ ಮಂಡಲ ಕಾರ್ಯದರ್ಶಿ ಕೃಷ್ಣಮೂರ್ತಿ ಮಾಡವು, ಸೀತಾರಾಘವ ವಿದ್ಯಾವರ್ಧಕ ಸಂಘ ಆಡಳಿತ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಕೊಚ್ಚಿ, ಸೀತಾರಾಘವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಂಕರನಾರಾಯಣ ಭಟ್ ಪೆರ್ನಾಜೆ, ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಭವಿತ್, ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಪಿ., ನಿವೃತ್ತ ಪ್ರಾಚಾರ್ಯರು ಕೆ.ಆರ್. ಗೋಪಾಲಕೃಷ್ಣ, ಶೈಕ್ಷಣಿಕ ಕಾರ್ಯದರ್ಶಿ ಶಿವಶಂಕರ ಭಟ್, ನಿವೃತ ಶಿಕ್ಷಕ ಸುಬ್ರಹ್ಮಣ್ಯ ಭಟ್ ಪಟ್ಟಾಜೆ ಉಪಸ್ಥಿತರಿದ್ದರು. ಆಡಳಿತ ನಿರ್ದೇಶಕಿ ಸರೋಜಿನಿ ನಾಗಪಯ್ಯ ಸ್ವಾಗತಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು