News Karnataka Kannada
Monday, May 06 2024
ಕ್ಯಾಂಪಸ್

ಉಜಿರೆಯ ಎಸ್‌ಡಿಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸೋಲಾರ್ ಘಟಕ ಉದ್ಘಾಟನೆ

Solar plant inaugurated at SDM Women's ITI College, Ujire
Photo Credit : News Kannada

ಉಜಿರೆ: ಭಾರತದ ದೇಶದ ಬ್ಯಾಂಕಿಗ್ ಮತ್ತು ಇತರ ಸಂಸ್ಥೆಗಳ ಲಾಭದ ಶೇ.0.5 ರಷ್ಟನ್ನು ಸಮಾಜಮುಖಿ ಕೆಲಸಗಳಿಗೆ ಮೀಸಲಿಡಲಾಗಿದೆ. ಕೆನರಾ ಬ್ಯಾಂಕ್‌ನವರು ಸೆಲ್ಕೊ ಜೊತೆಯಲ್ಲಿ ಸೇರಿ ವಿದ್ಯಾರ್ಥಿಗಳ ಬಾಳಿಗೆ ಬೆಳಕು ಕೊಡುತ್ತಿದ್ದಾರೆ. ವಿದ್ಯಾರ್ಥಿಗಳು ಬದಲಾವಣೆಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.

ಎಸ್‌ಡಿಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಕೆನರಾ ಬ್ಯಾಂಕ್ ಮತ್ತು ಸೆಲ್ಕೊ ಸೋಲಾರ್ ಲೈಟ್ ಪ್ರೈ.ಲಿ ಸಹಯೋಗದೊಂದಿಗೆ ಸೋಮವಾರ ಜರುಗಿದ ಸೋಲಾರ್ ವಿದ್ಯುತ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಮುಖ್ಯ ಅತಿಥಿಯಾಗಿದ್ದ ಕೆನರಾ ಬ್ಯಾಂಕ್, ಪುತ್ತೂರಿನ ಡಿವಿಜನ್ ಮ್ಯಾನೇಜರ್ ಸರ್ವೇಶ್ ಮಾತನಾಡಿ, ಸಮಾಜಮುಖಿ ನೆಲೆಯಲ್ಲಿ ಕೆನರಾ ಬ್ಯಾಂಕ್ ಮಾಡುವ ಸಹಾಯದ ಹಿನ್ನೆಲೆಯಲ್ಲಿ ಎಸ್‌ಡಿಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸೋಲಾರ್ ಘಟಕಕ್ಕಾಗಿ ಮೂರು ಲಕ್ಷದ ಸಹಾಯಧನ ನೀಡಲಾಗಿದೆ. ಕೌಶಲ್ಯವಿರುವವರಿಗೆ ಉದ್ಯೋಗ ಅವಕಾಶಗಳಿದ್ದು, ಅದಕ್ಕೆ ಬೇಕಾದ ಹಣಕಾಸಿನ ಸಹಾಯವನ್ನು ಕೆನರಾ ಬ್ಯಾಂಕ್ ಮಾಡುತ್ತದೆ ಎಂದರು.

ಸೆಲ್ಕೊ ಸೋಲಾರ್ ಲೈಟ್ ಪ್ರೈ.ಲಿ. ಮಣಿಪಾಲದ ಡಿ.ಜಿ.ಎಂ ಗುರುಪ್ರಕಾಶ್ ಶೆಟ್ಟಿ ಮಾತನಾಡಿ ” ಸೌರಶಕ್ತಿಯ ಬಗ್ಗೆ ಮಾಹಿತಿ ನೀಡುವ ಕಾರ್ಯಾಗಾರವನ್ನು ವರ್ಷದ ಹಿಂದೆ ಇದೇ ಕಾಲೇಜಿನಲ್ಲಿ ಮಾಡಲಾಗಿತ್ತು. ಪ್ರಾಂಶುಪಾಲರು ಮತ್ತು ಕಾರ್ಯದರ್ಶಿಯವರ ಸಹಕಾರದಿಂದ ಕಾಲೇಜಿನಲ್ಲಿ ಸೋಲಾರ್ ಘಟಕ ಸ್ಥಾಪನೆಯಾಗಿದೆ. ಹವಾಮಾನ ವೈಪರೀತ್ಯಗಳಿಂದ ಪಾರಾಗಲು ಸಾಂಪ್ರದಾಯಿಕ ಶೈಲಿಯ ಶಕ್ತಿಗಳ ಕಡೆ ಗಮನ ನೀಡಬೇಕಾಗಿದ್ದು, ಸೌರಶಕ್ತಿ ಅದಕ್ಕೆ ಉತ್ತಮ ಉದಾಹರಣೆ. ಸೋಲಾರ್ ಬಳಸುವುದರಿಂದ ದೇಶ ಮತ್ತು ಭೂಮಿ ಎರಡಕ್ಕೂ ಕೊಡುಗೆ ನೀಡಿದಂತೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು