ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಸಂಸ್ಕೃತ ವಿಭಾಗದ ವತಿಯಿಂದ ಶ್ರೀ ಸುಬ್ರಹ್ಮಣ್ಯೇಶ್ವರ ಪ್ರೌಢಶಾಲಾ(SSPU) ವಿಭಾಗದ ಸಂಸ್ಕೃತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕೇಂದ್ರಿತ ಚಟುವಟಿಕೆಗಳನ್ನು ಜೂ.27 ರಂದು ಹಮ್ಮಿಕೊಂಡರು.
ಮಹಾವಿದ್ಯಾಲಯದ ಸಂಸ್ಕೃತ ವಿಭಾಗದ ವಿದ್ಯಾರ್ಥಿಗಳಾದ ಪೃಥ್ವಿಶ್ರೀ, ಮೋಕ್ಷಿತ, ದೇವಿ ಪ್ರಸಾದ್ ಇವರು ಪ್ರೌಢಶಾಲಾ ಸಂಸ್ಕೃತ ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ನಡೆಸಿದರು.
ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಯಶವಂತ ರೈ ಹಾಗೂ ಸಂಸ್ಕೃತ ಶಿಕ್ಷಕರಾದ ರಘು ಬಿಜೂರು ಮತ್ತು ಮಹಾವಿದ್ಯಾಲಯದ ಸಂಸ್ಕೃತ ಉಪನ್ಯಾಸಕರಾದ ರಾಮಪ್ರಸಾದ್ ಎಸ್ ಇವರು ಪಾಲ್ಗೊಂಡಿದ್ದರು.