News Karnataka Kannada
Monday, May 13 2024
ಕ್ಯಾಂಪಸ್

ಉಜಿರೆ: ಅವಕಾಶಗಳ ಸದ್ಬಳಕೆಯಿಂದ ಆತ್ಮಸ್ಥೈರ್ಯ ಹೆಚ್ಚಳ

Taking advantage of the opportunities will boost your morale.
Photo Credit : News Kannada

ಉಜಿರೆ, ಆ.10: ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡರೆ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹರೀಶ್ ಎಂ.ವೈ ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷದ ಅಂಗವಾಗಿ ಉಜಿರೆಯ ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜು ಹಾಗೂ ಕೆನರಾ ಬ್ಯಾಂಕ್ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಕನ್ನಡ ಮತ್ತು ಇಂಗ್ಲಿಷ್ ಭಾಷಣ ಸ್ಪರ್ಧೆಯನ್ನು ಅವರು ಬುಧವಾರ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಹೊರಜಗತ್ತಿಗೆ ತೆರೆದುಕೊಳ್ಳುವ ಅವಕಾಶಗಳು ಕಡಿಮೆ ಇರುತ್ತವೆ. ಅವರಿಗೆ ಇಂತಹ ಕಾರ್ಯಕ್ರಮಗಳು ಒಳ್ಳೆಯ ವೇದಿಕೆಗಳನ್ನು ಕಲ್ಪಿಸಿಕೊಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಭಾರತವನ್ನು ವಿಶ್ವಗುರುವಾಗಿಸಲು ಪ್ರಜೆಗಳು ನೀಡುತ್ತಿರುವ ಕೊಡುಗೆಗಳ ಜೊತೆಗೆ ದೇಶಪ್ರೇಮ ಹಾಗೂಸಂಸ್ಕೃತಿಯನ್ನು ಇಡೀ ಜಗತ್ತಿಗೆ ಸಾರುವತ್ತ ಯುವಜನತೆ ಇನ್ನಷ್ಟು ಒಲವು ತೋರಬೇಕು. ಇದಕ್ಕಾಗಿ ನಮ್ಮ ದೇಶದ ಪ್ರಜೆಗಳು ಸದೃಢ, ಸುಜ್ಞಾನಿ ಹಾಗೂ ವಿಜ್ಞಾನಿಗಳಾಗಿ ಪ್ರತಿಯೊಂದು ಕ್ಷೇತ್ರದಲ್ಲಿ ಉನ್ನತ ಶ್ರೇಣಿಯಿಂದ ಹೊರಹೊಮ್ಮಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಟಿ. ಕೃಷ್ಣಮೂರ್ತಿ ವಹಿಸಿ, ಸ್ಪರ್ಧೆಯ ರೂಪುರೇಷೆಗಳನ್ನು ವಿವರಿಸಿದರು. ಉಜಿರೆಯ ಕೆನರಾ ಬ್ಯಾಂಕ್ ಶಾಖಾ ಪ್ರಬಂಧಕಿ ರಾಜಶ್ರೀ ಬಿ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲ ಮನೀಶ್ ಕುಮಾರ್ ಉಪಸ್ಥಿತರಿದ್ದರು.

ಕಾಲೇಜಿನ ಉಪನ್ಯಾಸಕ ಸುನಿಲ್ ಪಂಡಿತ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಪಾರ್ಶ್ವನಾಥ್ ವಂದಿಸಿದರು. ಡಾ. ನಾಗಣ್ಣ ಡಿ.ಎ ಕಾರ್ಯಕ್ರಮವನ್ನು ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು