ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ “ಮನೋರಂಜನೆ ಮಾಧ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶಗಳು” ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಫ್ರೀಲಾನ್ಸ್ ಕಂಟೆಂಟ್ ರೈಟರ್ ಹಾಗೂ ಎಸ್ಡಿಎಂಇ ಸೊಸೈಟಿಯ ಸೋಶಿಯಲ್ ಮೀಡಿಯಾ ಹೆಡ್ ಚರಿಷ್ಮಾ ಚೋಂದಮ್ಮ, ಇಂದಿನ ಡಿಜಿಟಲ್ ಯುಗದಲ್ಲಿ ಮಾಧ್ಯಮ ಕ್ಷೇತ್ರ ಬೆಳೆಯುತ್ತಿರುವ ವೇಗ ಹಾಗೂ ಮುಂದಿನ ಹತ್ತು ವರ್ಷಗಳಲ್ಲಿ ಇದು ಎಷ್ಟು ವಿಸ್ತಾರವಾಗಿ ಬೆಳೆಯಲಿದೆ, ಈ ಕ್ಷೇತ್ರದಲ್ಲಿ ಬೆಳೆಯಲು ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.
“ಒಬ್ಬ ಸ್ಕ್ರಿಪ್ಟ್ ರೈಟರ್ ಆಗಿ ಚಾನಲ್ ಸೇರಿದವ, ಮುಂದೆ ನಟ ಆಗಬಹುದು. ಎಡಿಟರ್ ಆಗಿ ಸೇರಿದವರು ಕಂಟೆಂಟ್ ರೈಟರ್ ಆಗಬಹುದು. ಥ್ರಿಲ್ಲರ್ ಕಥೆ ಬರೆಯುವವರು, ರೊಮ್ಯಾಂಟಿಕ್ ಕಥೆಗಳನ್ನು ಬರೆಯಬಹುದು. ಮನೋರಂಜನೆ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ನಾವು ಯಾವುದೋ ಒಂದು ವಿಭಾಗಕ್ಕೆ ಮೀಸಲಾಗದೇ, ನಮ್ಮನ್ನು ನಾವು ಎಲ್ಲಾ ಅವಕಾಶಗಳಿಗೂ ಸಂಪೂರ್ಣವಾಗಿ ತೆರೆದ ಮನಸ್ಸಿನಿಂದ ಒಪ್ಪಿಕೊಳ್ಳಲು ತಯಾರಿರಬೇಕು. ಎಲ್ಲವುದರ ಬಗ್ಗೆ ಕನಿಷ್ಟ ಜ್ಞಾನ ಇದ್ದರೆ ಮನೋರಂಜನಾ ಮಾಧ್ಯಮದಲ್ಲಿ ಯಶಸ್ವಿ ವೃತ್ತಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥ ಮಾಧವ ಹೊಳ್ಳ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸ್ನೇಹಾ ಸ್ವಾಗತಿಸಿದರೆ, ಧನುಶ್ರೀ ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿಕೊಟ್ಟರು. ವಿದ್ಯಾರ್ಥಿನಿ ಸುಮನಾ ಕಾರ್ಯಕ್ರಮ ನಿರೂಪಿಸಿದರು.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.