ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರಾದೇಶಿಕ ಕೇಂದ್ರ ತುಮಕೂರು ವ್ಯಾಪ್ತಿಯಲ್ಲಿ ಬರುವ ತುಮಕೂರಿನ ಅಕ್ಕ-ತಂಗಿ ಕೆರೆ ಹತ್ತಿರ ಇರುವ ವಿದ್ಯಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿ ಕಲಿಕಾರ್ಥಿ ಸಹಾಯ ಕೇಂದ್ರವನ್ನುಕರ್ನಾಟಕ ರಾಜ್ಯ ಮುಕ್ತ ವಿವಿ ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ . ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಮನೆ ಬಾಗಿಲಿಗೆ ಶಿಕ್ಷಣ ನೀಡುವುದೆ ಕರ್ನಾಟಕ ರಾಜ್ಯ ಮುಕ್ತ ವಿವಿ ಉದ್ದೇಶವಾಗಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ತುಮಕೂರಿನಲ್ಲಿ ನಾಲ್ಕು ಕರಾಮುವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಅದರಲ್ಲಿ ವಿದ್ಯಾ ಪ್ರಥಮ ದರ್ಜೆ ಕಾಲೇಜು ಸಹ ಒಂದಾಗಿದ್ದು, ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿವಿ ಕಲಿಕಾರ್ಥಿ ಸಹಾಯ ಕೇಂದ್ರಗಳ ಮೂಲಕವೂ ಸಹ ಮೈಸೂರು ಮುಕ್ತ ವಿವಿಗೆ ಪ್ರವೇಶಾತಿ ಪಡೆಯಬಹುದು ಎಂದು ತಿಳಿಸಿದರು.
ಪ್ರಸ್ತುತ 2022-23 ಜನವರಿ ಆವೃತ್ತಿ ಪ್ರವೇಶಾತಿ ಪ್ರಾರಂಭವಾಗಿದೆ. ಕಾರ್ಯಕ್ರಮದಲ್ಲಿ ವಿದ್ಯಾ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಅರ್ಜುನ್ ಎ.ಹೆಚ್., ಆಡಳಿತಾಧಿಕಾರಿಯಾದ ಕೃಷ್ಣಪ್ಪ. ಸಿ., ವಿದ್ಯಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜೇಶ್ ಕೆ.ಎಸ್. ಹಾಜರಿದ್ದರು.