ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಶಯ ಎಲ್ಲಾರಿಗೂ ಎಲ್ಲೆಡೆ ಶಿಕ್ಷಣ ಎಂಬುದು, ಅದರ ಅನ್ವಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗುವಂತೆ ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮೂಲಕ ಪದವಿಗಳನ್ನು ಪಡೆದುಕೊಳ್ಳಬಹುದು.
ಯುಜಿಸಿ ನಿಯಮಾವಳಿ ಪ್ರಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇರುತ್ತದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2022-23ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ ಎ,/ಬಿ ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಸ್ಸಿ (ಸಾಮಾನ್ಯ, ಐ ಟಿ, ಗೃಹ ವಿಜ್ಞಾನ)/, ಎಂಎ / ಎಂಸಿಜೆ, ಎಂಕಾಂ (ಡ್ಯುಯಲ್ ವಿಶೇಷತೆ- 1. ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು/ಎಚ್ಆರ್ ಎಂ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ &ಎಚ್ಆರ್ ಎಂ/ಹಣಕಾಸು) ಎಂ.ಬಿ.ಎ ಅನುಮೋದಿಸಲಾಗಿದೆ) (ವಿಶೇಷತೆ – •ಹಣಕಾಸು • ಎಚ್ಆರ್ ಎಂ • ಮಾರ್ಕೆಟಿಂಗ್ ನಿರ್ವಹಣೆ • ಕಾರ್ಯಾಚರಣೆಗಳು • ಪ್ರವಾಸೋದ್ಯಮ • ಕಾರ್ಪೊರೇಟ್ ಕಾನೂನು • ಮಾಹಿತಿ ತಂತ್ರಜ್ಞಾನ), ಎಂ.ಎಸ್ಸಿ., ಪಿಜಿ ಡಿಪ್ಲೋಮಾ., ಡಿಪ್ಲೋಮಾ., ಪ್ರಮಾಣಪತ್ರ ಕಾರ್ಯಕ್ರಮಗಳು ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.
ಯುಜಿಸಿ ನಿಯಮಾವಳಿ ಪ್ರಕಾರ ವಿದ್ಯಾರ್ಥಿಗಳು ಎರಡು ಡಿಗ್ರಿ ಪ್ರೋಗ್ರಾಮ್ಗಳನ್ನು ಒಂದೇ ವೇಳೆ (ಒಂದೇ ವರ್ಷ) ಓದಬಹುದು. ಒಂದು ಕೋರ್ಸ್ ರೆಗ್ಯುಲರ್ ಆಗಿದ್ದು, ಮತ್ತೊಂದು ಮುಕ್ತ ಮತ್ತು ಡಿಸ್ಟ್ಯಾನ್ಸ್ ಲರ್ನಿಂಗ್ ಕೋರ್ಸ್(ಒಡಿಎಲ್) / ಆನ್ಲೈನ್ ಮೋಡ್ ನಲ್ಲಿ ಇರಬಹುದು. ಅಥವಾ ಎರಡು ಕೋರ್ಸ್ಗಳು ಸಹ ಒಡಿಎಲ್ / ಆನ್ಲೈನ್ ಪ್ರೋಗ್ರಾಮ್ಸ್ಗಳು ಆಗಿರಬಹುದು.
ಇತರ ಕಾಲೇಜಿನಲ್ಲಿ ಅಥವಾ ರೆಗ್ಯುಲರ್ ಆಗಿ ಓದುತ್ತಿರುವ ವಿದ್ಯಾರ್ಥಿಗಳು ಮೊದಲ ವರ್ಷ ವ್ಯಾಸಂಗ ಮಾಡಿ ಕಾರಣಾಂತರಗಳಿಂದ ಓದಲು ಆಗದಿದ್ದರೆ ಅಥವಾ ರೆಗ್ಯುಲರ್ ಆಗಿ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದಿದ್ದರೆ, ಅಂತಹ ವಿದ್ಯಾರ್ಥಿಗಳು ಅರ್ಹತಾ ಮಾನದಂಡಗಳನ್ನು ಪೂರೈಸಿ 2ನೇ ಮತ್ತು 3ನೇ ವರ್ಷಕ್ಕೆ ಮುಕ್ತ ವಿವಿಯಲ್ಲಿ ಲ್ಯಾಟರಲ್ ಪ್ರವೇಶ ಅಥವಾ ನೇರ ಪ್ರವೇಶ ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರಿಸಬಹುದು.
ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರವೇಶಾತಿ ಸಂದರ್ಭದಲ್ಲಿ ಮಾತ್ರ ಸರ್ಕಾರಿ ರಜಾ ದಿನಗಳಾದ ಭಾನುವಾರ ಮತ್ತು 2ನೇ ಹಾಗೂ 4ನೇ ಶನಿವಾರ ಕಛೇರಿ ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು.
ಈ ಮೇಲ್ಕಂಡ ಕೋರ್ಸ್ ಗಳ ಪ್ರಥಮ ವರ್ಷದ ಪ್ರವೇಶಾತಿಗೆ ಅಂತಿಮ ದಿನಾಂಕ- 31/10/2022.
ಪ್ರವೇಶಾತಿ ಶುಲ್ಕದಲ್ಲಿ ವಿಶೇಷ ರಿಯಾಯಿತಿ:-
1. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ 15%.
2. ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ 15%.
3. ಅಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ 30%.
ಪೂರ್ಣ ಶುಲ್ಕ ವಿನಾಯಿತಿ:-
1. ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ
2. ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ
3. ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂಸಿಎ ಹೊರತು ಪಡಿಸಿ).
ಸೂಚನೆ:- SC/ST/OBC ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮುಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ:-
ಡಾ. ಲೋಕೇಶ ಆರ್ ,
ಪ್ರಾದೇಶಿಕ ನಿರ್ದೇಶಕರು,
ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ,
ಸಿಎ-07, ಟೂಡಾ ಲೇಔಟ್, ರಾಜೀವ್ ಗಾಂಧಿ ನಗರ, ಮೇಳೆಕೋಟಿ-ವೀರಸಾಗರ, ತುಮಕೂರು-572 105.
0816-2955580. 9844506629..