News Karnataka Kannada
Tuesday, April 30 2024
ಕ್ಯಾಂಪಸ್

ಉಜಿರೆ: ಶ್ರೀ ಧ. ಮಂ ಕಾಲೇಜಿನಲ್ಲಿ ರಕ್ತದಾನ ಶಿಬಿರ

Sdm
Photo Credit : News Kannada
ಉಜಿರೆ: ಶ್ರೀ ಧ. ಮಂ ಕಾಲೇಜಿನ ಎನ್ಎಸ್ಎಸ್  ಘಟಕದ ನೇತೃತ್ವದಲ್ಲಿ  ಯೂಥ್ ರೆಡ್ ಕ್ರಾಸ್,  ರೋವರ್ಸ್ & ರೇಂಜರ್ಸ್, ಸಾಮಾಜಿಕ ಜವಾಬ್ದಾರಿಗಳ ಉಪಕ್ರಮಗಳ ಸಮಿತಿಗಳ ಆಶ್ರಯದಲ್ಲಿ  ರಕ್ತ ನಿಧಿ, ಎಜೆ ಆಸ್ಪತ್ರೆ, ಮಂಗಳೂರು ಮತ್ತು ಎಸ್.ಡಿ.ಎಂ. ಆಸ್ಪತ್ರೆ, ಉಜಿರೆ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ  ರೋಗವಿಜ್ಞಾನ ವಿಭಾಗದ ವ್ಯವಸ್ಥಾಪಕ ನಿರ್ದೇಶಕಿ ಡಾ. ತೇಜಸ್ವಿನಿ ಮಾತನಾಡಿ ರಕ್ತದಾನದ ಮಹತ್ವವನ್ನು ತಿಳಿಸಿದರು.
ಈ ಸಂದರ್ಭ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲ ಡಾ. ಎ ಜಯಕುಮಾರ್ ಶೆಟ್ಟಿ ಮಾತನಾಡಿ ರಕ್ತದಾನ ಶಿಬಿರ ಆಯೋಜಿಸಲು ನಮ್ಮ ಕಾಲೇಜಿನ ಎನ್ಎಸ್ಎಸ್, ರೋವರ್ಸ್ & ರೇಂಜರ್ಸ್,  ಯೂತ್ ರೆಡ್ ಕ್ರಾಸ್ ಯಾವತ್ತೂ ಮುಂಚೂಣಿಯಲ್ಲಿರುತ್ತವೆ, ನಮ್ಮೊಂದಿಗೆ ಮುಂದೆಯೂ ಕೈ ಜೋಡಿಸಿ ಎಂದು ಎಜೆ ಹಾಗು ಎಸ್.ಡಿ.ಎಂ ಆಸ್ಪತ್ರೆಗಳಲ್ಲಿ ಮನವಿ ಮಾಡಿದರು.
ಶಿಬಿರ ದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಒಟ್ಟು 155 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಈ ಸಂದರ್ಭ ಎನ್ಎಸ್ಎಸ್, ಯೂಥ್ ರೆಡ್ ಕ್ರಾಸ್,  ರೇಂಜರ್ಸ್ ರೋವರ್ಸ್, ಸಾಮಾಜಿಕ ಜವಾಬ್ದಾರಿಗಳ ಉಪಕ್ರಮಗಳ ಸಮಿತಿಗಳ    ಸಂಯೋಜಕರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸ್ಕಂದನಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನವನೀತ್ ಕೃಷ್ಣ ವಂದಿಸಿದರು ‌.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು