ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಭಾರತ ದೇಶ ಕಂಡ ಮಹಾನ್ ದಾರ್ಶನಿಕ ವಿವೇಕಾನಂದರ ಚಿಕಾಗೋ ಉಪನ್ಯಾಸ ಸ್ಮರಣಾ ಕಾರ್ಯಕ್ರಮ ನಡೆಯಿತು.
ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ ಕಿಶೋರ್ ಪಾಟೀಲ್ ವಿವೇಕಾನಂದರ ಚಿಕಾಗೋ ಭಾಷಣದ ಕೆಲವು ವಿಚಾರವನ್ನು ಪ್ರಸ್ತುತಪಡಿಸಿದರು.
ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಉಪಸ್ಥಿತರಿದ್ದರು.