ಉಜಿರೆ: ಜ್ಞಾನವು ಪ್ರಾಯೋಗಿಕವಾಗಿ ಅನ್ವಯವಾದಾಗ ಮಾತ್ರ ಕಲಿಕೆಯ ಸಾರ್ಥಕತೆ ಸಾಧ್ಯ ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ಎನ್ ಉದಯಚಂದ್ರ ನುಡಿದರು.
ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಸಮ್ಯಕ್ ದರ್ಶನ್ ಸಭಾಂಗಣದಲ್ಲಿ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ಮತ್ತು ಸಂಶೋಧನಾ ವಿಭಾಗವು ಸೋಮವಾರ ಆಯೋಜಿಸಿದ್ದ ‘ಎಲೆಕ್ಟೊ ಹಬ್’ ಕ್ಲಬ್ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಾಯೋಗಿಕ ಕಲಿಕೆ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವವನ್ನು ಬೆಳೆಸುತ್ತದೆ. ಇಂತಹ ಕಲಿಕೆಯಿಂದ ವಿದ್ಯಾರ್ಥಿಗಳ
ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತದೆ. ಜೊತೆಗೆ ಇದು ವಿದ್ಯಾರ್ಥಿಗಳಲ್ಲಿ ತಾಳ್ಮೆಯ ಮನೋಭಾವವನ್ನು ಅಭಿವೃದ್ಧಿಪಡಿಸುತ್ತದೆ ಎಂದು ಹೇಳಿದರು.
ಈ ವೇಳೆ ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಿದ್ದ, ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ ಕೊಟ್ಟಾಯಮ್ನ ತಂತ್ರಜ್ಞಾನ ಮತ್ತು ಅನ್ವಯಿಕ ವಿಜ್ಞಾನ ವಿಭಾಗದ ನಿರ್ದೇಶಕರಾದ ಡಾ.ಕೆ.ಶ್ರೀಕೃಷ್ಣಕುಮಾರ್ ಮಾತನಾಡಿದರು.
ಯುವಜನತೆಗೆ ಅಸಾಧ್ಯವಾದುದನ್ನು ಸಾಧಿಸುವ ಅಂತಃಸತ್ವ ಇರುತ್ತದೆ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.
ಈ ಸಂದರ್ಭದಲ್ಲಿ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿಗಳು ರೂಪಿಸಿದ ಇ- ಮ್ಯಾಗಝಿನ್ ಇದೇ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳ ಪ್ರಾಯೋಗಿಕ ಕೌಶಲ್ಯಗಳ ಅಭಿವೃದ್ಧಿಯ ಉದ್ದೇಶದಿಂದ, ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿಗಳಿಗೋಸ್ಕರ ವಿದ್ಯಾರ್ಥಿಗಳಿಂದಲೇ ‘ಎಲೆಕ್ಟೊ ಹಬ್’ ಹುಟ್ಟಿಕೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಪದವಿ ಕಾಲೇಜಿನ ವಿಜ್ಞಾನ ನಿಕಾಯದ ಡೀನ್ ಪ್ರೊ. ಶಶಿಶೇಖರ ಎನ್ ಕಾಕತ್ಕರ್, ಸ್ನಾತಕೋತ್ತರ ಕೇಂದ್ರದ ಭೌತಶಾಸ್ತç ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಸಹನಾ ಕೆ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಅನುಪಮಾ ನಿರೂಪಿಸಿದರು. ಪ್ರೀತಿ ಪಾಟೀಲ್ ಸ್ವಾಗತಿಸಿದರೆ, ಮಾನಸಾ ವಂದಿಸಿದರು.