News Karnataka Kannada
Monday, April 29 2024
ಕ್ಯಾಂಪಸ್

ಉಜಿರೆ: ಎಸ್. ಡಿ. ಎಂ. ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ

S. D. M. Inauguration of Youth Red Cross Unit at the College
Photo Credit : By Author

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಉಜಿರೆಯ ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಧ್ಯಾಪಕರಾದ ಸಂಪತ್ ಕುಮಾರ್. ಕೆ ರವರು ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

“ಉತ್ತಮ ಸಂವಹನ ಕೌಶಲ್ಯ, ಹೊಸ ವಿಷಯಗಳ ತಿಳಿಯುವ ಉತ್ಸುಕತೆ ಹಾಗೂ ಏಕಾಗ್ರತೆಯ ಕಾರ್ಯಗಳಿಂದ ಮನುಷ್ಯನ ವ್ಯಕ್ತಿತ್ವ ವಿಕಸನವಾಗುತ್ತದೆ. ಯುವ ರೆಡ್ ಕ್ರಾಸ್ ಘಟಕವು ವಿದ್ಯಾರ್ಥಿಗಳಲ್ಲಿ ಸಹಾಯದ ಮನೋಭಾವನೆಯನ್ನು ಮೂಡಿಸಿ ಸರ್ವತೋಮುಖ ಬೆಳವಣಿಗೆಗೆ ನೆರವು ನೀಡುತ್ತದೆ. ರಕ್ತದಾನದಂತಹ ಶ್ರೇಷ್ಠ ದಾನಗಳಿಂದ ಇತರರ ಬಾಳಿಗೆ ಬೆಳಕಾಗಬಹುದಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಕಾರ್ಯಕ್ರಮ ಸಂಯೋಜಕಿಯಾದ ಪೂಜಿತಾ ವರ್ಮಾರವರು ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ದೀಕ್ಷಾ ಮತ್ತು ದಿವಾಕರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಕಶ್ಮಿನ್ ನಿರೂಪಿಸಿದರು. ಸನಾ ಸ್ವಾಗತಿಸಿ, ರೋಶಿತ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು