ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ವಿಚಾರ ಸಂಕಿರಣ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣವು ಜು.6ರಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ‘ಸಮ್ಯಗ್ದರ್ಶನ’ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ.

ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರು ಬೆಳಗ್ಗೆ 9.45ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಚಿಕ್ಕಮಗಳೂರಿನ ಸಾಹಿತಿ ಡಾ. ಎಚ್.ಎಸ್. ಸತ್ಯನಾರಾಯಣ ಅವರು ಪ್ರಧಾನ ಉಪನ್ಯಾಸ ನೀಡಲಿದ್ದಾರೆ. ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಕುವೆಂಪು ಕಾವ್ಯ ಗಾಯನ, ಕುವೆಂಪು ಕುರಿತ ಕವಿತೆಗಳ ವಾಚನ, ಕುವೆಂಪು ಪುಸ್ತಕಗಳ ವಿಮರ್ಶೆ, ‘ಶ್ಮಶಾನ ಕುರುಕ್ಷೇತ್ರ’ ನಾಟಕದ ಒಂದು ದೃಶ್ಯ ಪ್ರದರ್ಶನ ಹಾಗೂ ‘ಶ್ರೀ ರಾಮಾಯಣ ದರ್ಶನಂ’ ಕಾವ್ಯ ಭಾಗ ವಾಚನ ಕಾರ್ಯಕ್ರಮಗಳು ಸಂಕಿರಣದ ವಿಶೇಷ ಭಾಗವಾಗಿರಲಿವೆ ಎಂದು ಎಸ್.ಡಿ.ಎಂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಡಾ. ಬೋಜಮ್ಮ ಕೆ.ಎನ್. ತಿಳಿಸಿದ್ದಾರೆ.

Gayathri SG

Recent Posts

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

2 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

20 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

32 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

50 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

60 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

9 hours ago