ಉಜಿರೆ: ಮತದಾನದ ಅರಿವು ಮೂಡಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವುದು ಅಗತ್ಯವೆಂದು ಎಸ್.ಡಿ. ಎಮ್. ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ ಅಭಿಪ್ರಾಯಪಟ್ಟರು. ಶ್ರೀ. ಧ. ಮಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಆಯೋಜಿಸಿದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸದೃಢ ನಾಯಕನನ್ನು ಆಯ್ಕೆ ಮಾಡುವುದು ಪ್ರಜೆಗಳ ಕರ್ತವ್ಯ ಮತ್ತು ಹಕ್ಕು. ಮತದಾನ ದಿನವನ್ನು ರಜಾ ದಿನವೆಂದು ಭಾವಿಸದೇ ನಮ್ಮ ಹಕ್ಕನ್ನು ನಾವು ಚಲಾಯಿಸಬೇಕು, ಪ್ರತಿ ಬಾರಿಯೂ ಮತದಾರರ ಸಂಖ್ಯೆ ಏರಿಕೆಯಾಗುತ್ತಿರುವುದು ಖುಷಿ ವಿಷಯವಾಗಿದ್ದು, ಜನರಲ್ಲಿ ಇನ್ನಷ್ಟು ಜಾಗೃತಿ ಅಗತ್ಯವಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಮತದಾನದ ಹಕ್ಕನ್ನು ಚಲಾಯಿಸುವಂತೆ’ ಕಾಲೇಜಿನ ಪ್ರಾಂಶುಪಾಲರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಶಾಂತಿಪ್ರಕಾಶ್, ಕಲಾ ವಿಭಾಗದ ಡೀನ್ ಡಾ. ಶಾಲಿಪ್, ನೋಂದಣಿ ವಿಭಾಗದ ಶಶಿಶೇಖರ್, ನಂದಕುಮಾರಿ, ವಿಜ್ಞಾನ ವಿಭಾಗದ ಡೀನ್ ಡಾ. ಸವಿತಾ ವಾಣಿಜ್ಯ ವಿಭಾಗದ ಡೀನ್ ಶಕುಂತಲಾ, ಮತ್ತು ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅನ್ನಪೂರ್ಣ ನಿರೂಪಿಸಿ, ಜಯಶ್ರೀ ಸ್ವಾಗತಿಸಿ, ತೃಪ್ತಿ ವಂದಿಸಿದರು.
ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಕೊಲೆ ಪ್ರಕರಣ ಹಿನ್ನಲೆ ಈ ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.ರಾಯಲ್ ಕೆನಡಿಯನ್ ಮೌಂಟೆಡ್…
ತನ್ನ ತಾಯಿಯೊಂದಿಗೆ ನಗರದ ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಯುವತಿ ಕಾಣೆಯಾದ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು…
ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ದಾರುಣ ಘಟನೆ ಕಳಸ ತಾಲೂಕಿನ…
2016 ರಲ್ಲಿ ನಡೆದ ರೋಹಿತ್ ವೇಮುಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಅಂತಿಮ ವರದಿಗೆ ವೇಮುಲ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು…
ಗರ್ಭಿಣಿಯನ್ನು ಮರ್ಯಾದೆ ಗೇಡು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ವಿಜಯಪುರ ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…