ಉಜಿರೆ: ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯ, ಆಜಾದಿಕ ಅಮೃತ್ ಮಹೋತ್ಸವ ಹಾಗೂ ಜಿ-20 ಶೃಂಗಸಭೆಯ ಅಂಗವಾಗಿ ಏಕ್ ಭಾರತ್ ಶ್ರೇಷ್ಠ ಭಾರತ ಯೋಜನೆ ಅಡಿಯಲ್ಲಿ ಇಪ್ಪತ್ತರಿಂದ ರಿಂದ ಮೂವತ್ತು ವರ್ಷದ ಯುವಕರಿಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಆಯೋಜಿಸಿರುವ ” ರಾಷ್ಟ್ರೀಯ ಯುವ -ಸಂಗಮ” ಕಾರ್ಯಕ್ರಮಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಪ್ರಥಮ ವರ್ಷದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿ ಶಾಮಪ್ರಸಾದ್ ಆಯ್ಕೆ ಆಗಿದ್ದಾರೆ.
ಇವರು ಫೆಬ್ರವರಿ 24 ರಿಂದ ಮಾರ್ಚ್ 4 ರವರೆಗೆ ಅಸ್ಸಾಂ ರಾಜ್ಯದ ಗುಹಾಟಿಯದ ‘ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ ಯಲ್ಲಿ ನಡೆಯಲಿರುವ ಒಂದು ವಾರದ ವಿಭಿನ್ನ ಕಾರ್ಯಕ್ರಮಗಳಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.
ಈಶಾನ್ಯ ಭಾರತದ ರಾಜ್ಯಗಳು ಮತ್ತು ಇತರ ರಾಜ್ಯಗಳ ನಡುವಿನ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಬೆಸುಗೆ ಕಾರ್ಯಕ್ರಮ ಜೊತೆಗೆ ಅಸ್ಸಾಂ ರಾಜ್ಯದ ರಾಜ್ಯಪಾಲ ರೊಂದಿಗಿನ ಸಂವಾದ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ.ಇವರು ಉಜಿರೆಯ ರತ್ನ ಮಾನಸ ಮತ್ತು ಶ್ರೀ ಸಿದ್ಧವನ ಗುರುಕುಲದ ಹಳೆ ವಿದ್ಯಾರ್ಥಿಯಾಗಿದ್ದಾರೆ.
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…