ಉಜಿರೆ: ಬೆಂಗಳೂರಿನ ಕೆ.ಎಲ್.ಇ. ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸಿದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಹುಮಾನಗಳಿಸಿದ್ದಾರೆ.
ಧರಿತ್ರಿ ಭಿಡೆ ಏಕಪಾತ್ರಾಭಿನಯದಲ್ಲಿ ಪ್ರಥಮ, ವಿಘ್ನೇಶ್ ಆಚಾರ್ಯ ಚಿತ್ರಕಲೆಯಲ್ಲಿ ಪ್ರಥಮ, ಸಿಂಧೂರ ಎಸ್. ಶೆಂಡ್ಯೆ ಏಕಪಾತ್ರಾಭಿನಯದಲ್ಲಿ ದ್ವಿತೀಯ ಬಹುಮಾನವನ್ನು ಗಳಿಸಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. ಬಹುಮಾನ ವಿಜೇತ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಚಾರ್ಯರು ಅಭಿನಂದಿಸಿರುತ್ತಾರೆ.