News Karnataka Kannada
Thursday, May 09 2024
ಕ್ಯಾಂಪಸ್

ಉಜಿರೆ: ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರ

Ujire: Taluk Physical Education Teachers Workshop
Photo Credit : By Author

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ) ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಆ. 6 ರಂದು ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರ ನಡೆಯಿತು.

ಕಾರ್ಯಗಾರವನ್ನು ಶ್ರೀ ಧ. ಮ೦ . ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಸತಿಶ್ಚಂದ್ರ ಎಸ್ . ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಕೋರಿದರು . ಶ್ರೀಧ ಮ. ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ಸದಾಶಿವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಶ್ರೀ. ಧ.ಮ. ಕ್ರೀಡಾ ಸಂಸ್ಥೆಯ ಕಾರ್ಯದರ್ಶಿ ರಮೇಶ್., ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಯರಾಜ್ ಜೈನ್. ಗ್ರೇಡ್-2 ದೈ.ಶಿ.ಶಿ. ಸಂಘದ ಅಧ್ಯಕ್ಷ ರವಿರಾಜ್, ಕಾರ್ಯದರ್ಶಿ ಗಂಗಾಧರ ಗೌಡ, ಸಂಪನ್ಮೂಲ ವ್ಯಕ್ತಿ ಮೋನಪ್ಪಪಟ್ಟೆಮೊದಲಾದವರು ಉಪಸ್ತಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ ಸ್ವಾಗತಿಸಿ , ಶ್ರೀ.ಧ.ಮ.ಪ್ರೌ ಶಾಲೆಯ ದೈಹಿಕ ಶಿಕ್ಷಕ ಪರಮೇಶ್ವರ ವಂದಿಸಿದರು. ಮುಂಡಾಜೆ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಸುದಿನ ಪೂಜಾರಿ, ಮರಿಯಪ್ಪ ಗೌಡ, ಸಂತೋಷ್ ಮತ್ತು ಕೃಷ್ಣಾನಂದ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು