ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ) ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಆ. 6 ರಂದು ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರ ನಡೆಯಿತು.
ಕಾರ್ಯಗಾರವನ್ನು ಶ್ರೀ ಧ. ಮ೦ . ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಸತಿಶ್ಚಂದ್ರ ಎಸ್ . ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಕೋರಿದರು . ಶ್ರೀಧ ಮ. ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ಸದಾಶಿವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಶ್ರೀ. ಧ.ಮ. ಕ್ರೀಡಾ ಸಂಸ್ಥೆಯ ಕಾರ್ಯದರ್ಶಿ ರಮೇಶ್., ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಯರಾಜ್ ಜೈನ್. ಗ್ರೇಡ್-2 ದೈ.ಶಿ.ಶಿ. ಸಂಘದ ಅಧ್ಯಕ್ಷ ರವಿರಾಜ್, ಕಾರ್ಯದರ್ಶಿ ಗಂಗಾಧರ ಗೌಡ, ಸಂಪನ್ಮೂಲ ವ್ಯಕ್ತಿ ಮೋನಪ್ಪಪಟ್ಟೆಮೊದಲಾದವರು ಉಪಸ್ತಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ ಸ್ವಾಗತಿಸಿ , ಶ್ರೀ.ಧ.ಮ.ಪ್ರೌ ಶಾಲೆಯ ದೈಹಿಕ ಶಿಕ್ಷಕ ಪರಮೇಶ್ವರ ವಂದಿಸಿದರು. ಮುಂಡಾಜೆ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುಣಪಾಲ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಸುದಿನ ಪೂಜಾರಿ, ಮರಿಯಪ್ಪ ಗೌಡ, ಸಂತೋಷ್ ಮತ್ತು ಕೃಷ್ಣಾನಂದ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.