News Karnataka Kannada
Tuesday, April 30 2024
ಕ್ಯಾಂಪಸ್

ಉಜಿರೆ: ಚರ್ಚಾ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿಗೆ ಪ್ರಥಮ

Ujire: Vivekananda College, Puttur wins first prize in debate competition
Photo Credit :

ಉಜಿರೆ: ಅ. 17ರಂದು ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ನಡೆದ ಪೂಜ್ಯ ಶ್ರೀ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯ ಪರ – ವಿರೋಧ ವಿಭಾಗದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು ಪ್ರಥಮ ಸ್ಥಾನ ಪಡೆದುಕೊಂಡಿದೆ. ದ್ವೀತಿಯ ಸ್ಥಾನವನ್ನು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜು ಗಳಿಸಿಕೊಂಡಿದೆ. ವೈಯಕ್ತಿಕ ವಿಭಾಗದಲ್ಲಿ ಸೆಂಟ್ ಫಿಲೋಮಿನಾ ಕಾಲೇಜಿನ ಶ್ರೀದೇವಿ. ಕೆ ಪಡೆದುಕೊಂಡರು.

ಸ್ಪರ್ಧೆಯು ಆಕರ್ಷಕ ಬಹುಮಾನವನ್ನು ಒಳಗೊಂಡಿದ್ದು, ಪ್ರಥಮ ಬಹುಮಾನವು ಟ್ರೋಫಿ, ಹತ್ತು ಸಾವಿರ ನಗದು ಹಾಗೂ
ಫಲಕವನ್ನು ಒಳಗೊಂಡಿದೆ. ದ್ವಿತೀಯ ಬಹುಮಾನ ಎಂಟು ಸಾವಿರ ನಗದು ಹಾಗೂ ಟ್ರೋಫಿಯನ್ನು ಒಳಗೊಂಡಿದೆ. ವೈಯಕ್ತಿಕ
ಬಹುಮಾನವು ಐದು ಸಾವಿರ ನಗದು ಪ್ರಶಸ್ತಿ ಪತ್ರ ಒಳಗೊಂಡಿದೆ. ಸ್ವರ್ಧೆಯಲ್ಲಿ ಒಟ್ಟು 16 ಕಾಲೇಜು ಆಗಮಿಸಿ, ಸಾಮಾಜಿಕ
ಜಾಲತಾಣಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿವೆಯೇ? ಎಂಬ ವಿಷಯದ ಮೇಲೆ ಚರ್ಚೆ ಮಂಡಿಸಿದರು.

ತೀರ್ಪುಗಾರರಾಗಿ ಗುರುದೇವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ವಾಣಿ ಕಾಲೇಜಿನ ಪ್ರಾಧ್ಯಾಪಕಿ ಡಾ. ಮೈತ್ರಿ ಭಟ್ ಆಗಮಿಸಿ ಕಾರ್ಯಕ್ರಮದ ಕುರಿತು ಅನಿಸಿಕೆ ಹಂಚಿಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು