ಚಿತ್ರದುರ್ಗ : ಕಾರು ಪಲ್ಟಿ ಹೊಡೆದ ಕಾರಣ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ.
ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಮೃತ ದುರ್ದೈವಿಗಳಾಗಿದ್ದಾರೆ. ಅತಿಯಾದ ವೇಗವೇ ಅಪಘಾತಕ್ಕೆ ಮೂಲ ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

