ತುಳುನಾಡಿನ ದೈವಾರಾಧನೆ ಎಂಬುದು ಕೇವಲ ಆಚರಣೆಯಲ್ಲ, ಅದೊಂದು ಅಪಾರ ನಂಬಿಕೆ ಮತ್ತು ಶಿಸ್ತಿನ ಪದ್ಧತಿ. ಇತ್ತೀಚೆಗೆ ದೈವದ ನೇಮೋತ್ಸವಗಳ ವೇಳೆ ವಿಡಿಯೋ ಮಾಡುವ ಮತ್ತು ಫೋಟೋ ತೆಗೆಯುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇದು ದೈವದ ಅವಕೃಪೆಗೆ ಕಾರಣವಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮಹಿಳೆಯೊಬ್ಬರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ನೇಮೋತ್ಸವ ನಡೆಯುತ್ತಿದ್ದಾಗ ದೈವವು ಹಠಾತ್ತಾಗಿ ವಿಡಿಯೋ ಮಾಡುತ್ತಿದ್ದವರತ್ತ ತಿರುಗಿ ತೀವ್ರ ಆಕ್ರೋಶದಿಂದ ಎಚ್ಚರಿಕೆ ನೀಡಿದೆ.

ವಿಡಿಯೋ ಹಂಚಿಕೊಂಡಿರುವ ಮಹಿಳೆಯ ಪ್ರಕಾರ, ಕೇವಲ ವಿಡಿಯೋ ಮಾಡಿದ್ದಕ್ಕೆ ಮಾತ್ರವಲ್ಲದೆ, ತಾನು ಕೆಂಪು ಬಣ್ಣದ ಬಟ್ಟೆ ಧರಿಸಿದ್ದಕ್ಕೂ ದೈವವು ಕೋಪಗೊಂಡಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚಿನ ‘ರೀಲ್ಸ್’ ಸಂಸ್ಕೃತಿಯು ಈ ಪವಿತ್ರ ಸಂಪ್ರದಾಯದ ಗಂಭೀರತೆಯನ್ನು ಹಾಳುಮಾಡುತ್ತಿದೆ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

View this post on Instagram

A post shared by News Karnataka (@newskarnataka)