ಭೋಪಾಲ್: ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ಅವರ ಆಪ್ತ ಮನೋಜ್ ಕಲ್ಯಾಣೆ ಅವರನ್ನು ಇಂದೋರ್ನಲ್ಲಿ ಅಪರಿಚಿತರು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.ಮೃತ ಮನೋಜ್ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ ಕೂಡ ಆಗಿದ್ದರು. ಮೋನುವನ್ನು ಹತ್ಯೆಗೈದ ಪಾತಕಿಗಳು ಅವರ ಮನೆಯ ಸಮೀಪವೇ ವಾಸವಿದ್ದರು ಎಂದು ಹೇಳಲಾಗುತ್ತಿದೆ.
ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದ್ದು, ಕೊಲೆಯ ಹಿಂದಿನ ಕಾರಣ ‘ಹಳೆಯ ದ್ವೇಷ’ವಾಗಿರಬಹುದು ಎಂದು ಅವರು ಹೇಳಿದ್ದಾರೆ. ಸದ್ಯ ತಲೆ ಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಗರದ ಚಿಮನ್ ಬಾಗ್ ಕ್ರಾಸಿಂಗ್ಗೆ ಬೈಕ್ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ನಾಯಕನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Ad