ಕಾಸರಗೋಡು: ಹಲಸಿನ ಹಣ್ಣು ತುಂಡರಿಸು ತ್ತಿದ್ದಾಗ ಆಕಸ್ಮಿಕ ವಾಗಿ ಕತ್ತಿ ಮೇಲೆ ಬಿದ್ದು ಎಂಟು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ವಿದ್ಯಾನಗರ ಠಾಣಾ ವ್ಯಾಪ್ತಿಯ ಪಾಡಿ ಬೆಳ್ಳೂರಡ್ಕ ಎಂಬಲ್ಲಿ ನಡೆದಿದೆ.
ಬದಿಯಡ್ಕ ಪಿಲಾಂಕಟ್ಟೆಯ ಅಮೀರ್ ಸುಲೈಕಾ ದಂಪತಿ ಪುತ್ರ ಹುಸೈನ್ ಶಹಬಾಸ್ ಮೃತಪಟ್ಟವನು. ತಾಯಿ ಜೊತೆ ಆಲಂಪಾಡಿ ಬೆಳ್ಳೂರಡ್ಕದಲ್ಲಿರುವ ಅಜ್ಜಿ ಮನೆಗೆ ಹುಸೈನ್ ಬಂದಿದ್ದನು. ತಾಯಿ ಅಡುಗೆ ಕೋಣೆ ಹೊರಗಡೆ ಮುಟ್ಟು ಕತ್ತಿ ಯಲ್ಲಿ ಹಲಸಿನ ಹಣ್ಣು ತುಂಡರಿಸುತ್ತಿದ್ದಾಗ ಆಟವಾಡುತ್ತಿದ್ದ ಹುಸೈನ್ ಓಡಿ ಕೊಂಡುಬಂದಾಗ ಆಕಸ್ಮಿಕವಾಗಿ ಕಾಲು ಜಾರಿ ಮುಟ್ಟು ಕತ್ತಿಯ ಮೇಲೆ ಬಿದ್ದಿದ್ದು, ಗಂಭೀರ ಗಾಯಗೊಂಡ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ದ ರೂ ಜೀವ ಉಳಿಸಲಾಗಲಿಲ್ಲ.
ಎದೆಗೆ ಉಂಟಾದ ಗಂಭೀರ ಗಾಯ ಕಾರಣ ಎನ್ನಲಾಗಿದೆ. ಅವಳಿ ಮಕ್ಕಳಲ್ಲಿ ಹುಸೈನ್ ಒಬ್ಬನಾಗಿದ್ದಾನೆ. ವಿದ್ಯಾನಗರ ಠಾಣಾ ಪೊಲೀಸರು ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.

