ವಿಜಯನಗರ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಾನಸಿಕ‌ ಅಸ್ವಸ್ಥೆಯನ್ನು ಬೆತ್ತಲೆಗೊಳಿಸಿ ಹತ್ಯೆ.ಮಾಡಿರುವಂತಹ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಬಳಿಯ ತಿಪ್ಪೇಹಳ್ಳಿಯಲ್ಲಿ ನಡೆದಿದೆ. ಚಳ್ಳಕೆರೆ ತಾಲ್ಲೂಕಿನ ಅಬ್ಬೇನಹಳ್ಳಿಯ ನೇತ್ರಾ (30) ಮೃತ ಮಾನಸಿಕ ಅಸ್ವಸ್ಥೆ. ತಿಪ್ಪೇಹಳ್ಳಿ- ಅಬ್ಬೇನಹಳ್ಳಿಯ ಮಧ್ಯದ ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ.

ಶ್ವಾನದಳ, ಬೆರಳಚ್ಚು ಸಿಬ್ಬಂದಿ ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ. ವಿಜಯನಗರ ಎಸ್​ಪಿ ಶ್ರೀ ಹರಿಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೊಟ್ಟೂರು ಸಿಪಿಐ ವೆಂಕಟಸ್ವಾಮಿ, ಕಾನಹೊಸಹಳ್ಳಿ ಪಿಎಸ್ಐ ಸಿದ್ದರಾಮಪ್ಪ ಬಿದರಾಣಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾನಾಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.