Showing 20 of 623 posts • Page 1 of 32
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ವಿಭಾಗವು, ಸಭಾಂಗಣದಲ್ಲಿ ‘ಬದಲಾಗುತ್ತಿರುವ ಜಗತ್ತಿನಲ್ಲಿ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವುದು: ಉದಯೋನ್ಮುಖ ಸವಾಲುಗಳು ಮತ್ತು ಸುಸ್ಥಿರ ಪ್ರತಿಕ್ರಿಯೆಗಳು’ ಎಂಬ ವಿಷಯದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಸೆಪ್ಟೆಂಬರ್ 16 ಮತ್ತು 17, 2026 ರಂದು ವಿಶ್ವವಿದ್ಯಾಲಯದ ಮಾಫೇ ಬ್ಲಾಕ್ನಲ್ಲಿರುವ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಆಯೋಜಿಸಿದೆ.
ನಗರದ ಎ.ಜೆ. ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ನೂತನ ಎ.ಜೆ. ಆಡಿಟೋರಿಯಂ ಉದ್ಘಾಟನೆ ಹಾಗೂ ಪದವಿ ಪ್ರದಾನ ಸಮಾರಂಭ ಸೆ. 12ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಸಂಸ್ಥೆಯ ಕ್ಯಾಂಪಸ್ ನಿರ್ದೇಶಕ ಡಾ. ಟಿ. ಜಯಪ್ರಕಾಶ್ ರಾವ್ ತಿಳಿಸಿದ್ದಾರೆ.
ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಸೂಕ್ತ ಕೈಗನ್ನಡಿಯಾಗಿದೆ ಎಂಬುದಾಗಿ ಶಾಲಾ ಹಂತದ ಪ್ರತಿಭಾ ಕಾರಂಜಿ “ಅಲೋ ಸ್ಪಾರ್ಕ್ – 2026” ಸ್ಪರ್ಧಿಗಳನ್ನು ಉದ್ಘಾಟಿಸುತ್ತಾ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾ ಇಲ್ಲಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಂ. ಗುರು ಡೆನ್ಸಿಲ್ ರೊಡ್ರಿಗಸ್ ತಿಳಿಸಿದರು.
ಕೆನರಾ ಕಾಲೇಜು (ಸ್ವಾಯತ್ತ), ಮಂಗಳೂರು – ಸೆಂಟರ್ ಫಾರ್ ಪಿಜಿ ಸ್ಟಡೀಸ್ ಇನ್ ಕಾಮರ್ಸ್ ವತಿಯಿಂದ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿ ಹಾಗೂ ವೃತ್ತಿಪರ ಸಾಮರ್ಥ್ಯವರ್ಧನೆಯ ಉದ್ದೇಶದಿಂದ ವಿವಿಧ ಸ್ಕಿಲ್ ಡೆವಲಪ್ಮೆಂಟ್ ಕ್ಲಬ್ಗಳ ಉದ್ಘಾಟನಾ ಕಾರ್ಯಕ್ರಮವನ್ನು ಸೆಪ್ಟಂಬರ್ ೦9, 2026 ರ೦ದು ಆಯೋಜಿಸಲಾಯಿತು.
ಕೆನರಾ ಕಾಲೇಜು (ಸ್ವಾಯತ್ತ) ಮಂಗಳೂರು, ಇಲ್ಲಿನ, ವಾಣಿಜ್ಯ ಸ್ನಾತಕೋತ್ತರ ವಿಭಾಗದ ವತಿಯಿಂದ 2026–27ನೇ ಶೈಕ್ಷಣಿಕ ಸಾಲಿನ ಹೆಚ್ಚುವರಿ ಕೋರ್ಸ್ಗಳ ಉದ್ಘಾಟನಾ ಕಾರ್ಯಕ್ರಮವನ್ನು 8ನೇ ಸೆಪ್ಟೆಂಬರ್ 2026 ರಂದು ಆಯೋಜಿಸಲಾಯಿತು. MS Excel for Employability Skills ಹಾಗೂ Applied Tally Prime in Commerce ಎಂಬ ಎರಡು ಹೆಚ್ಚುವರಿ ಕೋರ್ಸ್ಗಳನ್ನು ಪರಿಚಯಿಸಲಾಯಿತು.
ಮಂಗಳೂರು: ಭಾರತ ಸರ್ಕಾರದ ನೀತಿ ಆಯೋಗದ (NITI Aayog) ‘ಅಟಲ್ ಇನ್ನೋವೇಶನ್ ಮಿಷನ್’ (AIM) ಬೆಂಬಲದೊಂದಿಗೆ ಸ್ಥಾಪಿಸಲಾದ ‘ಅಟಲ್ ಕಮ್ಯುನಿಟಿ ಇನ್ನೋವೇಶನ್ ಸೆಂಟರ್’ (ACIC) – ‘ACIC ಸಹ್ಯಾದ್ರಿ ಫೌಂಡೇಶನ್’ನ ಉದ್ಘಾಟನೆಯೊಂದಿಗೆ, ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ತನ್ನ ನಾವೀನ್ಯತೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ತಲುಪಿದೆ. ಕರಾವಳಿ ಕರ್ನಾಟಕದಾದ್ಯಂತ ತಳಮಟ್ಟದ ನಾವೀನ್ಯತೆ, ಉದ್ಯಮಶೀಲತೆ ಮತ್ತು ಸುಸ್ಥಿರ ಜೀವನೋಪಾಯಗಳನ್ನು ಬಲಪಡಿಸುವ ದೃಷ್ಟಿಕೋನದೊಂದಿಗೆ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಈ ಉದ್ಘಾಟನಾ ಸಮಾರಂಭದಲ್ಲಿ ನಿವೃತ್ತ ಸೇನಾಧಿಕಾರಿ ಹಾಗೂ […]
ಶಕ್ತಿನಗರದಲ್ಲಿರುವ ವಿಶೇಷಚೇತನ ಹಾಗೂ ಬುದ್ಧಿಮಾಂದ್ಯ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರ ‘ಸಾನಿಧ್ಯ’ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು.
ವಿಶ್ವ ಫಿಸಿಯೋಥೆರಪಿ ದಿನ 2026ರ ಅಂಗವಾಗಿ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ (FMCOP) ವತಿಯಿಂದ “ಹೃದಯ ಮತ್ತು ರಕ್ತನಾಳ ಸಂಬಂಧಿತ ಕಾಯಿಲೆಗಳು ಹಾಗೂ ಪಾರ್ಶ್ವವಾಯು (Stroke) ತಡೆಗಟ್ಟುವಿಕೆ, ನಿರ್ವಹಣೆ ಮತ್ತು ಪುನರ್ವಸತಿ ಯಲ್ಲಿ ಫಿಸಿಯೋಥೆರಪಿ ಮತ್ತು ದೈಹಿಕ ಚಟುವಟಿಕೆಯ ಪಾತ್ರ” ಎಂಬ ವಿಷಯದಡಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆ ಸಹಯೋಗದಲ್ಲಿ ಸೆ.9ರಿಂದ 15ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ‘ವನಸುಮ ಜೇಸಿ ಸಪ್ತಾಹ’ ಹೆಸರಿನ ಒಂದು ವಾರದ ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿದೆ.
ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ , ಕೂಳೂರು ಕ್ಯಾಂಪಸ್ನ ವೈ.ಎಂ.ಕೆ. ಸಭಾಂಗಣದಲ್ಲಿ ಇದೇ ಬರುವ ಸೆಪ್ಟೆಂಬರ್ 07ರ ಸೋಮವಾರದಂದು ಬೆಳಗ್ಗೆ 9.30ಕ್ಕೆ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ‘ನವ್ಯಾರಂಭ-2026’ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ.
ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ (ಎಸ್ಜೆಇಸಿ) ಶಿಕ್ಷಕರ ದಿನಾಚರಣೆ 2026ನ್ನು ಸೆಪ್ಟೆಂಬರ್ 5ರಂದು ಮಧ್ಯಾಹ್ನ 2 ಗಂಟೆಗೆ ಕಲಾಂ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು.
ತಾಲ್ಲೂಕಿನ ಮಲ್ಲೂಪುರ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನಡೆದ 2026-27ನೇ ಸಾಲಿನ ದೊಡ್ಡಕವಲಂದೆ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಹೆಡತಲೆ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಪಿಯು ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ರಾಷ್ಟ್ರಮಟ್ಟದ “ಅಲೋಶಿಯನ್ ಫೆಸ್ಟ್–2026″ಗೆ ಸೋಮವಾರ ಎಲ್ಎಫ್ ರಸ್ಕಿನ್ಹಾ ಸಭಾಂಗಣದಲ್ಲಿ ಅದ್ದೂರಿ ಚಾಲನೆ ದೊರೆಯಿತು. ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ
ಯೆನೆಪೋಯ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಯೆನೆಪೋಯ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸಸ್ ಕಾಲೇಜು ಮತ್ತು ಆಸ್ಪತ್ರೆ (YNYSCH) ವತಿಯಿಂದ “ಮೋಕ್ಸಿಬಷನ್” ವಿಷಯದ ಕುರಿತು ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ
ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಶ್ರೀಮತಿ ಎ. ವನಜ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ದಿಂದ “ನೆಟ್ವರ್ಕ್ ಜೀವಿತಾವಧಿಯನ್ನು ಹೆಚ್ಚಿಸುವುದು ಮತ್ತು ವೈರ್ಲೆಸ್ ಮೊಬೈಲ್ ಅಡ್-ಹಾಕ್ ನೆಟ್ವರ್ಕ್ಗಳಲ್ಲಿ ಬಹು ನಿರ್ಬಂಧಿತ ಗುಣಮಟ್ಟದ ಸೇವಾ ರೂಟಿಂಗ್ ಸಮಸ್ಯೆಗಳನ್ನು ನಿರ್ಣಯಿಸುವುದು” ಎಂಬ ಪ್ರಬಂಧಕ್ಕಾಗಿ ಪಿಎಚ್ಡಿ ಪದವಿ ನೀಡಲಾಗಿದೆ.
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ (ಎಸ್ಜೆಇಸಿ) 21ನೇ ಪದವಿ ಪ್ರದಾನ ಸಮಾರಂಭವು ಆಗಸ್ಟ್ 29, 2026 ರಂದು ಮಂಗಳೂರಿನ ಕಲಾಮ್ ಆಡಿಟೋರಿಯಂನಲ್ಲಿ ಎರಡು ಹಂತಗಳಲ್ಲಿ ನಡೆಯಿತು.
ಸೆಂಟರ್ ಫಾರ್ ಎಥಿಕ್ಸ್ ಮತ್ತು ಫೋರೆನ್ಸಿಕ್ ಅಂಥರೊಪೊಲೊಜಿ ಯೂನಿಟ್, ಡಿಪಾರ್ಟ್ಮೆಂಟ್ ಆಫ್ ಫೋರೆನ್ಸಿಕ್ ಮೆಡಿಸಿನ್ ಅಂಡ್ ಟಾಕ್ಸಿಕಾಳೋಜಿ, ಯೆನೆಪೊಯ ವಿಶ್ವವಿದ್ಯಾಲಯದ ಆಗಸ್ಟ್ 29, 2026 ರಂದು ವಿಶ್ವ ಮಾನವೀಯ ದಿನಾಚರಣೆ 2026 ರ ಭಾಗವಾಗಿ “ವಿಪತ್ತುಗಳ ಸಮಯದಲ್ಲಿ ಮಾನವೀಯ ಕ್ರಮ ಮತ್ತು ಮೃತ ದೇಹಗಳನ್ನು ಒಳಗೊಂಡ ಸಂಶೋಧನಾ ಚೌಕಟ್ಟು” ಎಂಬ ಹೈಬ್ರಿಡ್ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸುತ್ತಿದೆ.
ಮಂಗಳೂರಿನ ವಾಮಂಜೂರಿನಲ್ಲಿರುವ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ವತಿಯಿಂದ 2026ನೇ ಸಾಲಿನ ಪದವೀಧರರ 21ನೇ ಪದವಿ ಪ್ರದಾನ ಸಮಾರಂಭವು ಆಗಸ್ಟ್ 29, 2026ರ ಶನಿವಾರದಂದು ಕಾಲೇಜಿನ ಕಲಾಂ ಆಡಿಟೋರಿಯಂನಲ್ಲಿ ನಡೆಯಲಿದೆ.
ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹರೆಂದು ಪರಿಗಣಿಸಲ್ಪಡುವ ಪದ್ಮಶ್ರೀ ಡಾ. ಎಸ್. ಆರ್. ರಂಗನಾಥನ್ (1892–1972) ಅವರ 134ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ, ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ)ದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗವು ಕೇಂದ್ರ ಗ್ರಂಥಾಲಯ ಹಾಗೂ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ (KALA), ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದೊಂದಿಗೆ 2026ರ ಆಗಸ್ಟ್ 22ರಂದು ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಿತು.