ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಮಣಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ. ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಆರಂಭಕ್ಕೆ ಇಂದು (ಜು.22) ಸಾಂಕೇತಿಕವಾಗಿ ಚಾಲನೆ ನೀಡಿದರು. ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ ಮತ್ತು ಯುಕೆಜಿ ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ರಾಜ್ಯದಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ಕೂಡ ಮಾಡಿದ್ದರು.

ಸರ್ಕಾರಕ್ಕೆ ಈ ಹಿಂದೆ ಹಲವು ಬಾರಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ-ಯುಕೆಜಿ ತರಗತಿ ಆರಂಭಿಸುವುದಕ್ಕೆ ಮನವಿ ಮಾಡಲಾಗಿತ್ತು. ಆದರೆ ಈ ಮನವಿಗೆ ಸರ್ಕಾರಗಳು ಪುರಸ್ಕರಿಸಿರಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ-ಯುಕೆಜಿ ತರಗತಿಗೆ ತೆಗೆದರೆ ಅಂಗನವಾಡಿ ಕೇಂದ್ರಗಳು ಖಾಲಿ ಆಗುತ್ತವೆ. ಕಾರ್ಯಕರ್ತೆಯರು, ಸಹಾಯಕರಿಯರು, ಅಡುಗೆ ಸಹಾಯಕಿರು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲೇ ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ ಮತ್ತು ಯುಕೆಜಿ ಆರಂಭಿಸಬೇಕೆಂದು ಒತ್ತಾಯಿದ್ದರು.ಇದೀಗ, ಸರ್ಕಾರ ಅಂಗನವಾಡಿಯಲ್ಲೇ ಎಲ್​ಕೆಜಿ ಮತ್ತು ಯುಕೆಜಿ ಆರಂಭಿಸಿದೆ.

https://x.com/laxmi_hebbalkar/status/1815324319163248661