Showing 20 of 605 posts • Page 2 of 31
ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನಲ್ಲಿ ಹಲವು ದಶಕಗಳಿಂದ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುತ್ತಾ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದೆ.
ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ ಅಭ್ಯಾಸ ಬಹಳ ಮುಖ್ಯವಾಗಿದೆ.
ಮಾದಕ ದ್ರವ್ಯ ಜೀವನವನ್ನು ಹಾಳು ಮಾಡುತ್ತದೆ. ಸ್ನೇಹಿತರು ಮಾದಕ ವ್ಯಸನಕ್ಕೆ ತುತ್ತಾದರೆ ಶಿಕ್ಷಕರಿಗೆ ತಿಳಿಯದೆ ಇರಬಹುದು, ಆದರೆ ನಿಮ್ಮ ಸ್ನೇಹಿತರು ವ್ಯಸನಕ್ಕೆ ಬಲಿಯಾಗದಂತೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ, ಪ್ರಾಂಶುಪಾಲರಿಗೆ ಮಾಹಿತಿ ನೀಡಬೇಕು ಎಂದು ಬೆಳ್ತಂಗಡಿ ತಾಲೂಕು ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಹೇಳಿದರು.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ, ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ.ಯವರಿಗೆ ಜೂನ್ 25, 2026 ರಂದು ಭಾರತ ಸರ್ಕಾರವು ಅಧಿಕೃತವಾಗಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ನಲ್ಲಿ ಗೌರವ ಕರ್ನಲ್ ಹುದ್ದೆ ಮತ್ತು ‘ಕರ್ನಲ್ ಕಮಾಂಡೆಂಟ್’ (ಸಂಖ್ಯೆ: UN/NOTICE*/2026/102) ಆಗಿ ನೇಮಕ ಮಾಡಿದೆ. ಈ ಗೌರವಕ್ಕಾಗಿ ಎನ್.ಸಿ.ಸಿ. ಪ್ರಧಾನ ಕಚೇರಿ, ಮಂಗಳೂರು ಗ್ರೂಪ್ ನವರು ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್ಜೆ ಅವರನ್ನು ಈ ಮಹಾನ್ ಗೌರವಕ್ಕಾಗಿ ಶಿಫಾರಸು ಮಾಡಿದ್ದರು.
ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಹಾಗೂ ಸುಸ್ಥಿರ ಅಭ್ಯಾಸಗಳನ್ನು ಉತ್ತೇಜಿಸುವ ಉದ್ದೇಶದಿಂದ, ಯೆನೆಪೋಯ ನರ್ಸಿಂಗ್ ಕಾಲೇಜಿನ ಇನ್ಸ್ಟಿಟ್ಯೂಷನಲ್ ಇನ್ನೋವೇಶನ್ ಕಮಿಟಿ (IIC) ಆಯುಷ್ ಕ್ಲಸ್ಟರ್, ಯೂತ್ ರೆಡ್ ಕ್ರಾಸ್ (YRC), ಪರಿಸರ ಅಧ್ಯಯನ ಕೇಂದ್ರ ಮತ್ತು ಇಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಪರಿಸರ ದಿನಾಚರಣೆ 2026’ ರ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಸರಣಿಯನ್ನು ಆಯೋಜಿಸಲಾಗಿತ್ತು.
ಯೆನೆಪೋಯ ದಂತ ಮಹಾವಿದ್ಯಾಲಯ, ಯೆನೆಪೋಯ (ಪರಿಗಣಿತ ವಿಶ್ವವಿದ್ಯಾಲಯ)ದ ಮೌಖಿಕ ವೈದ್ಯಕೀಯ ಮತ್ತು ರೇಡಿಯಾಲಜಿ ವಿಭಾಗವು ವಿಭಾಗದ ಮುಖ್ಯಸ್ಥೆ ಡಾ. ವೀಣಾ ಕೆ. ಎಂ., ಪ್ರಾಧ್ಯಾಪಕಿ ಹಾಗೂ ವಿಭಾಗದ ಮುಖ್ಯಸ್ಥೆ ಅವರ ಮಾರ್ಗದರ್ಶನದಲ್ಲಿ ಯಂಗ್ ಇಂಡಿಯನ್ಸ್ (YI), ಮಂಗಳೂರು ಸಹಯೋಗದೊಂದಿಗೆ 2026ರ ಜೂನ್ 18ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಕಲ್ಬಾವಿ ಕನ್ಸ್ಯೂಮರ್ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಮೌಖಿಕ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು.
ನಗರದ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರು ನಗರದ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ನಡುವೆ ಜೂನ್ 22, 2026 ರಂದು ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ಪರಸ್ಪರ ಸಹಕಾರ ಒಪ್ಪಂದಕ್ಕೆ (MoU) ಸಹಿ ಹಾಕಲಾಯಿತು.
ನಮ್ಮ ಸಾಧನೆಯೇ ಪರಿಶ್ರಮವಾಗಿ ಪರಿವರ್ತನೆಯಾದಾಗ ನಾವು ಅಂದುಕೊಂಡ ಯೋಜನೆ ನಿಶ್ಚಲವಾಗಿ ಕಾರ್ಯಗತವಾಗಲು ಸಾಧ್ಯವಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಆಯೋಜಿಸಲಾಗುವ 16ನೆ ಆವೃತ್ತಿಯ ಈ ವರ್ಷದ ಉದ್ಯೋಗ ಮೇಳ ಆ.7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು.
ದೀನದಲಿತರ ನೋವಿಗೆ ಧನಿಯಾಗಿ, ಸಮಾಜಕ್ಕೆ ತನ್ನನ್ನು ತಾನೇ ಅರ್ಪಿಸಿಕೊಂಡ ದೈವತ್ವಕ್ಕೇರಿದ ಸಂತ ಅಲೋಶಿಯಸ್ ಗೊಂಝಾಗ ಇವರ ಹುಟ್ಟುಹಬ್ಬವನ್ನು ಶಾಲಾ ಪಾಲಕರ ದಿನಾಚರಣೆಯಾಗಿ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜ್ಞಾನವಿಕಾಸ ಯೋಜನೆಯ ಅಂತರ್ಗತವಾಗಿ ವಾಲ್ಪಾಡಿ ಗ್ರಾಮದ ಪೆರಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 15ರಂದು ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಾತ್ರದ ಕುರಿತು ಸಂವಾದ ಚರ್ಚೆ ನಡೆಯಿತು.
ಜುಲೈ ತಿಂಗಳಲ್ಲಿ ಮಲೆಷ್ಯಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಪ್ರಿಸ್ಬಿ ಕ್ರೀಡಾಕೂಟದಲ್ಲಿ ಭಾರತದ ಪರವಾಗಿ ಪ್ರತಿನಿಧಿಸುತ್ತಿರುವ ತಾಲೂಕಿನ ಶಿಂಡನಪುರ ಗ್ರಾಮದ ರೈತನ ಮಗಳು ಸಂಧ್ಯಾಗೆ ಗಡಿನಾಡ ರಕ್ಷಣಾ ಸೇನೆ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ವಿಶ್ವವಿದ್ಯಾಲಯಯದಲ್ಲಿ ವಿದ್ಯಾರ್ಥಿಗಳ ಮೂಲಭೂತ ಸಮಸ್ಯೆಗಳನ್ನ ಬಗೆಹರಿಸಲು ಆಗ್ರಹಿಸಿ ಮತ್ತು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಕೋಣಾಜೆ ಆಡಳಿತ ಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಯೆನೆಪೊಯ ದಂತ ಮಹಾವಿದ್ಯಾಲಯದ ತಂಬಾಕು ನಿಷೇಧ ಕೇಂದ್ರವು 2026ರ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ “ಆಕರ್ಷಣೆಯ ಮುಖವಾಡ ಬಯಲು – ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು” ಎಂಬ ವಿಷಯದಡಿ ಒಂದು ವಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.
ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕಾರ್ಯಕ್ರಮ ಪ್ರಾರ್ಥನೆಯೊಂದಿಗೆ ಆರಂಭವಾಯಿತು. “ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದಕ್ಷತೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ಶಾಲೆಗೆ, ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡುವಂತಾಗಲಿ.” ಎಂದು ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರು ಮತ್ತು ಉರ್ವಾ ಇಮ್ಯಾಕ್ಯುಲೇಟ್ ಚರ್ಚಿನ ಧರ್ಮ ಗುರುಗಳಾಗಿರುವ ವಂ. ಗುರು ಬೆಂಜಮಿನ್ ಪಿಂಟೋ ರವರು 2026- 27 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಹಿತವಚನ ನುಡಿದರು.
ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NITK), ಸುರತ್ಕಲ್, 2025–26 ಆರ್ಥಿಕ ವರ್ಷದ Groww ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಘೋಷಿಸಿದೆ. Groww, ಆರ್ಥಿಕ ಸೇವಾ ವೇದಿಕೆ, ಸಂಸ್ಥೆಯ ಎಲ್ಲಾ ಬಿ.ಟೆಕ್ ವಿಭಾಗಗಳ 200 ಪದವಿಪೂರ್ವ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಿದೆ. ಈ ಕಾರ್ಯಕ್ರಮವು ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ಒದಗಿಸುತ್ತದೆ.
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂ.5 ರಂದು ವಿದ್ವತ್ ಪಿ.ಯು. ಕಾಲೇಜು, ಗುರುವಾಯನಕೆರೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ಕಾಲೇಜು ಆವರಣದಲ್ಲಿ ಹೂ ಹಾಗೂ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
: ಏ.22, 23, 24ರಂದು ನಡೆದಿದ್ದ 2026ರ UG CET ಪರೀಕ್ಷೆಯ ಫಲಿತಾಂಶ ನಾಳೆ (ಜೂ.6) ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ (CFAL), ಮಂಗಳೂರಿನ 36 ವಿದ್ಯಾರ್ಥಿಗಳು JEE Advanced 2026ರಲ್ಲಿ ಅರ್ಹತೆ ಪಡೆದು, ಭಾರತೀಯ ತಾಂತ್ರಿಕ ಸಂಸ್ಥೆಗಳಾದ (IITs) ಪ್ರವೇಶಕ್ಕಾಗಿ ನಡೆಯುವ Joint Seat Allocation Authority (JoSAA) ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.
ಭಾರತೀಯ ಎಂಜಿನಿಯರಿಂಗ್ ಶಿಕ್ಷಣ ಕ್ಷೇತ್ರದ ಉನ್ನತ ಸಂಸ್ಥೆಗಳಾದ ಐಐಟಿ, ಎನ್ ಐಐಟಿ, ಐಐಐಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ.