Showing 20 of 580 posts • Page 3 of 29
2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಪ್ರಥಮ ರ್ಯಾಂಕ್ (ವಿಜ್ಞಾನ) ಪಡೆದ ಕುಮಾರಿ ಪ್ರಿನ್ಸಿಲ್ಲಾ ಕಾರ್ಡೋಜಾ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಮಂಡಳಿಯಿಂದ ಗೌರವ ಸನ್ಮಾನ ನೀಡಲಾಯಿತು. ಈ ಸನ್ಮಾನ ಕಾರ್ಯಕ್ರಮ ಮಂಗಳೂರು ಜಿಲ್ಲಾ ಪಂಚಾಯತ್ ತ್ರೈಮಾಸಿಕ ಸಭೆಯಲ್ಲಿ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಸಮ್ಮುಖದಲ್ಲಿ ನಡೆಯಿತು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ತನ್ನ ಕ್ಯಾಂಪಸ್ನಲ್ಲಿ ಏಪ್ರಿಲ್ 17, 2026 ರಂದು ಸಹ್ಯಾದ್ರಿ ಕಾರ್ನಿವಲ್ 2026 ಅನ್ನು ಬಹಳ ಉತ್ಸಾಹದಿಂದ ಆಯೋಜಿಸಿತ್ತು.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ (ಎಸ್.ಜೆ.ಇ.ಸಿ) ತರಬೇತಿ ಮತ್ತು ನಿಯೋಜನೆ ಘಟಕವು, ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್ ಹಾಗೂ ಇಂಟೆಲಿಜೆಂಟ್ ಕಂಪ್ಯೂಟಿಂಗ್ ಅಂಡ್ ಬಿಸಿನೆಸ್ ಸಿಸ್ಟಮ್ಸ್ ವಿಭಾಗಗಳ ಸಹಯೋಗದಲ್ಲಿ, ಸ್ಕೆಪ್ಟಿಕ್ಸ್ ಜೊತೆಗೆ “ಹ್ಯಾಕ್ ಟು ಫ್ಯೂಚರ್ 4.0 (ಎಚ್.ಟಿ.ಎಫ್ 4.0)” ಹ್ಯಾಕಥಾನ್ನ ನಾಲ್ಕನೇ ಆವೃತ್ತಿಯನ್ನು ಏಪ್ರಿಲ್ 15, 2026 ರಂದು ಕಾಲೇಜಿನ ಕಲಾಮ್ ಸಭಾಂಗಣದಲ್ಲಿ ಭವ್ಯವಾಗಿ ಉದ್ಘಾಟಿಸಿತು.
ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 36ನೇ ಪದವಿ ಪ್ರದಾನ ಸಮಾರಂಭವನ್ನು ದಿನಾಂಕ 16.04.2026 ರಂದು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಯಿತು.
ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ಸ್ನಲ್ಲಿ ಎಫ್ಎಂಸಿಐ ಪದವಿ ಪ್ರಧಾನ 2026 ಕಾರ್ಯಕ್ರಮ ಏಪ್ರಿಲ್ 16ರಿಂದ 18ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ ನಿರ್ದೇಶಕರಾದ ಫಾ. ಫೌಸ್ಟಿನ್ ಲೂಕಾಸ್ ಲೋಬೋ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಸೆಂಟರ್ ಫಾರ್ ಅಡ್ವಾನ್ಸ್ ಲರ್ನಿಂಗ್ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದು, ಸಂಸ್ಥೆಯ ಶೇ.100ರಷ್ಟು ಫಲಿತಾಂಶ ಪಡೆದಿದೆ.
ರಾಜ್ಯ ಮಟ್ಟದಲ್ಲಿ ಅಗ್ರ ಸ್ಥಾನ: 600ರಲ್ಲಿ 599 ಅಂಕಗಳನ್ನು ಪ್ರಿನ್ಸಿಲಾ ಕಾರ್ದೋಜಾ ಅವರು ಪಡೆದು ಕೊಂಡಿದ್ಧಾರೆ. ರಾಜ್ಯ ಮಟ್ಟದಲ್ಲಿ 600 ರಲ್ಲಿ 598 ಅಂಕ ಗಳನ್ನು ಪಡೆದು ಮೀನಾಕ್ಷಿ ಉನ್ನಿತನ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ಧಾರೆ .
ವಿಶ್ವ ಆರೋಗ್ಯ ದಿನ-2026ರ ಅಂಗವಾಗಿ, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯು, ಈ ವರ್ಷದ ವಿಷಯವಾದ ಆರೋಗ್ಯಕ್ಕಾಗಿ ಒಟ್ಟಾಗಿ-ವಿಜ್ಞಾನವನ್ನು ಬೆಂಬಲಿಸೋಣ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಿತು.
ನಗರದ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ)ಯಲ್ಲಿ “ಮಿಲನ್ 2026” ಎಂಬ ಸಾಂಸ್ಕೃತಿಕ ವೈವಿಧ್ಯತೆಯ ಹಬ್ಬವನ್ನು 2026 ಏಪ್ರಿಲ್ 10 ರಂದು ಭವ್ಯವಾಗಿ ಆಯೋಜಿಸಲಾಯಿತು. ಕಾಲೇಜು ಆವರಣಕ್ಕೆ ಆಗಮಿಸಿದ ಎಲ್ಲರನ್ನು ವಿದ್ಯಾರ್ಥಿಗಳಿಂದ ರೂಪಿಸಲಾದ ಬಣ್ಣಬಣ್ಣದ ಕಲಾಕೃತಿಗಳು ಸ್ವಾಗತಿಸಿತು.
2026ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಗುರುವಾರ ಪ್ರಕಟಗೊಂಡಿದೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ವಾಮಂಜೂರು, ತನ್ನ ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಮತ್ತು ಏಕತೆಯನ್ನು ಆಚರಿಸುವ ಉದ್ದೇಶದಿಂದ “ಮಿಲನ್ 2026” ಎಂಬ ಭವ್ಯ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಲು ಸಜ್ಜಾಗಿದೆ. ಈ ಬಹುನಿರೀಕ್ಷಿತ ಕಾರ್ಯಕ್ರಮವು 2026 ಏಪ್ರಿಲ್ 10 ರಂದು ಎಸ್ಜೆಇಸಿ ಆವರಣದಲ್ಲಿ ನಡೆಯಲಿದೆ.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026 ಏಪ್ರಿಲ್ 9ರಂದು ಸಂಜೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾದುದು, ಈ ದೇಶದ ಪ್ರತಿಯೊಬ್ಬರೂ ಕೂಡ ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ನಮ್ಮ ದೇಶ ವಿಶ್ವಕ್ಕೆ ಪರಿಚಯವಾಗುವುದಕ್ಕೆ ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಇವರು ತಿಳಿಸಿದರು.
ನಾಡಿನ ಸೈನಿಕರು ಎಲ್ಲವನ್ನೂ ನಮಗಾಗಿ ಧಾರೆ ಎರೆದವರು. ಬಿಸಿಲು, ಮಳೆ, ಚಳಿ ಯಾವುದನ್ನು ಲೆಕ್ಕಿಸದೆ ಕರ್ತವ್ಯವೇ ಮುಖ್ಯ ಎಂಬಂತೆ ತಾಯಿ ಭಾರತಿಯ ಸೇವೆಯನ್ನು ಹಗಲಿರುಳು ಮಾಡುತ್ತಿದ್ದಾನೆ.
ರಾಷ್ಟ್ರಮಟ್ಟದ JEE/NEET ಪ್ರವೇಶ ಪರೀಕ್ಷೆಗಳಲ್ಲಿ ಕರ್ನಾಟಕದ ವಿದ್ಯಾರ್ಥಿಗಳು ಅಗ್ರಸ್ಥಾನ ಪಡೆಯುವಂತೆ ಸಜ್ಜುಗೊಳಿಸಲು ಇಲ್ಲಿನ ಖ್ಯಾತ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದ ‘ಸ್ಟೇಟ್ ಟಾಪರ್ಸ್’ (State Toppers Batch) ಹಾಗೂ ‘ಸೂಪರ್ 36’ (SUPER 36) ಎಂಬ ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದೆ.
ಗಲ್ಫ್ ಮೆಡಿಕಲ್ ಯೂನಿವರ್ಸಿಟಿ ಮತ್ತೊಂದು ಮಹತ್ವದ ಜಾಗತಿಕ ಸಾಧನೆ ಮಾಡಿದ್ದು, ಅದರ ಸಹ ಸಂಸ್ಥೆ ಕಾಲೇಜ್ ಆಫ್ ಫಾರ್ಮಸಿ, ಕ್ಯೂಎಸ್ ವರ್ಲ್ಡ್ ಯುನಿವರ್ಸಿಟಿ ರ್ಯಾಂಕಿಗ್ಸ್ ಬೈ ಸಬ್ಜೆಕ್ಟ್ 2026ರಲ್ಲಿ ಫಾರ್ಮಸಿ ಮತ್ತು ಫಾರ್ಮಕಾಲಜಿ ವಿಭಾಗದಲ್ಲಿ ವಿಶ್ವದ 351–400 ಸ್ಥಾನಗಳ ಬ್ಯಾಂಡ್ನಲ್ಲಿ ಸ್ಥಾನ ಪಡೆದಿದೆ.
ಬೆಂಜಮಿನ್ ಮೆಮೋರಿಯಲ್ ಸ್ಪೋರ್ಟ್ಸ್ ಫೌಂಡೇಶನ್ (BMFS) ವತಿಯಿಂದ ಆಯೋಜಿಸಲಾದ ಸಮರ್ ಕೋಚಿಂಗ್ ಕ್ಯಾಂಪ್ 2026 ಅನ್ನು ಸಂತ ಅಲೋಶಿಯಸ್ ಪಿಯು ಕಾಲೇಜು ಮೈದಾನದಲ್ಲಿ ಉದ್ಘಾಟಿಸಲಾಯಿತು. ಈ ಶಿಬಿರವು ಯುವ ಕ್ರೀಡಾಪಟುಗಳ ಶಾರೀರಿಕ ಹಾಗೂ ಮಾನಸಿಕ ಅಭಿವೃದ್ಧಿಗೆ ಮಹತ್ವದ ವೇದಿಕೆಯಾಗಲಿದೆ.
ತಜ್ಞರಿಂದ ಜ್ಞಾನವನ್ನು ಪಡೆದುಕೊಳ್ಳುವ ವಿನೂತನ ಜಾಗತಿಕ ಕಾರ್ಯಕ್ರಮವಾದ ಟೆಡ್ ಎಕ್ಸ್ ಒಡಿಶಾದ ಭುವನೇಶ್ವರದಲ್ಲಿರುವ ಪ್ರತಿಷ್ಠಿತ ಕಳಿಂಗ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರಗಿದ್ದು ಜಾದೂಗಾರ ಕುದ್ರೋಳಿ ಗಣೇಶ್ ರವರು ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ನೀಡಿದರು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ಏಳನೇ ತರಗತಿಯ ವಿದ್ಯಾರ್ಥಿನಿ ಅನನ್ಯ ಬಿ. ಅವರು ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆಗಾಗಿ ಕೊಡಮಾಡುವ ‘ಇನ್ಸ್ಫಯರ್ ಅವಾರ್ಡ್ ಮಾನಕ್’ 2025-26 ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮರ್ಯಾದಾ ಪುರುಷೋತ್ತಮ ಶ್ರೀರಾಮನು ನಮಗೆ ಆದರ್ಶ ವ್ಯಕ್ತಿ. ರಾಮನಂತೆ ನಡೆಯಲು ಅವನ ಗುಣಗಳನ್ನು ಅಳವಡಿಸಿಕೊಳ್ಳಬೇಕು.