Categories: ಮನರಂಜನೆ

ಆಸ್ಕರ್ ರೇಸ್ ನಲ್ಲಿ ಕನ್ನಡ ಸಿನೆಮಾ ‘ರಂಗಿತರಂಗ’

ಹೊಸದಿಲ್ಲಿ:  ಭಾರತದಿಂದ ಅಧಿಕೃತವಾಗಿ ಆಸ್ಕರ್ ಸ್ಪರ್ಧೆಗೆ ನಾಮಕರಣ ಮಾಡಲಾಗಿರುವ ಕನ್ನಡ ಸಿನೆಮಾ ‘ರಂಗಿತರಂಗ’ ಲ್ಯಾಟರಲ್ ಪ್ರವೇಶ ಪಡೆದಿದೆ.

ನಿರ್ದೇಶಕ ಅನೂಪ್ ಭಂಡಾರಿಯವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡ ಮಾಹಿತಿ ಪ್ರಕಾರ ಆಸ್ಕರ್ ಸಮಿತಿ ಅಂತಿಮಗೊಳಿಸಿರುವ 305 ಚಿತ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿರುವ 305 ಚಿತ್ರಗಳ ಪಟ್ಟಿಯಲ್ಲಿ ಕನ್ನಡದ ಕೇರ್ ಆಫ್ ಫುಟ್ ಪಾತ್ 2 ಸ್ಥಾನ ಪಡೆದಿರುವುದು ಈಗಾಗಲೇ ತಿಳಿದ ವಿಚಾರವಾಗಿದೆ.

ಅನೂಪ್ ಭಂಡಾರಿಯವರ ರಂಗಿತರಂಗ ರಾಜ್ಯಾದ್ಯಂತ ಮಲ್ಟಿಫ್ಲೆಕ್ಸ್ ಗಳಲ್ಲಿ 25 ವಾರಗಳನ್ನು ಪೂರೈಸಿತ್ತು. ಆ ನಿಟ್ಟಿನಲ್ಲಿ ರಂಗಿತರಂಗ ದಾಖಲೆ ನಿರ್ಮಿಸಿತ್ತು. ವಿಕೆ ಪ್ರಕಾಶ್ ನಿರ್ಮಾಣದ ರಂಗಿತರಂಗ ಸಿನಿಮಾವನ್ನು ಅನೂಪ್ ಭಂಡಾರಿ ನಿರ್ದೇಶಿಸಿದ್ದರು. ನಿರೂಪ್ ಭಂಡಾರಿ, ಆವಂತಿಕಾ ಶೆಟ್ಟಿ, ರಾಧಿಕಾ ಚೇತನ್, ಸಾಯಿಕುಮಾರ್ ತಾರಾಗಣದಲ್ಲಿದ್ದರು. ರಂಗಿತರಂಗ ಜರ್ಮನಿ, ಕೆನಡಾ, ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ, ನಾರ್ವೆ, ಸಿಂಗಾಪುರ್, ಹಾಂಗ್ ಕಾಂಗ್, ಜಪಾನ್ ಸೇರಿದಂತೆ ವಿದೇಶಗಳಲ್ಲೂ ಬಿಡುಗಡೆಯಾಗಿತ್ತು.

ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾದ ಕನ್ನಡ ಸಿನಿಮಾ ರಂಗಿತರಂಗದ ಜತೆಗೆ ಮಲೆಯಾಳಂ ಸಿನೆಮಾ ‘ಜಲಂ’, ಕೊಂಕಣಿ ಸಿನೆಮಾ ‘ನಾಚೋಮ್ ಇಅ ಕುಂಪ್ಸಾಪುರ್’ ಕೂಡ ಅರ್ಹತೆಯ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

Desk

Recent Posts

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

2 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

12 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

17 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

51 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

1 hour ago