ಹೊಸದಿಲ್ಲಿ: ಭಾರತದಿಂದ ಅಧಿಕೃತವಾಗಿ ಆಸ್ಕರ್ ಸ್ಪರ್ಧೆಗೆ ನಾಮಕರಣ ಮಾಡಲಾಗಿರುವ ಕನ್ನಡ ಸಿನೆಮಾ ‘ರಂಗಿತರಂಗ’ ಲ್ಯಾಟರಲ್ ಪ್ರವೇಶ ಪಡೆದಿದೆ.
ಅನೂಪ್ ಭಂಡಾರಿಯವರ ರಂಗಿತರಂಗ ರಾಜ್ಯಾದ್ಯಂತ ಮಲ್ಟಿಫ್ಲೆಕ್ಸ್ ಗಳಲ್ಲಿ 25 ವಾರಗಳನ್ನು ಪೂರೈಸಿತ್ತು. ಆ ನಿಟ್ಟಿನಲ್ಲಿ ರಂಗಿತರಂಗ ದಾಖಲೆ ನಿರ್ಮಿಸಿತ್ತು. ವಿಕೆ ಪ್ರಕಾಶ್ ನಿರ್ಮಾಣದ ರಂಗಿತರಂಗ ಸಿನಿಮಾವನ್ನು ಅನೂಪ್ ಭಂಡಾರಿ ನಿರ್ದೇಶಿಸಿದ್ದರು. ನಿರೂಪ್ ಭಂಡಾರಿ, ಆವಂತಿಕಾ ಶೆಟ್ಟಿ, ರಾಧಿಕಾ ಚೇತನ್, ಸಾಯಿಕುಮಾರ್ ತಾರಾಗಣದಲ್ಲಿದ್ದರು. ರಂಗಿತರಂಗ ಜರ್ಮನಿ, ಕೆನಡಾ, ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ, ನಾರ್ವೆ, ಸಿಂಗಾಪುರ್, ಹಾಂಗ್ ಕಾಂಗ್, ಜಪಾನ್ ಸೇರಿದಂತೆ ವಿದೇಶಗಳಲ್ಲೂ ಬಿಡುಗಡೆಯಾಗಿತ್ತು.
ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾದ ಕನ್ನಡ ಸಿನಿಮಾ ರಂಗಿತರಂಗದ ಜತೆಗೆ ಮಲೆಯಾಳಂ ಸಿನೆಮಾ ‘ಜಲಂ’, ಕೊಂಕಣಿ ಸಿನೆಮಾ ‘ನಾಚೋಮ್ ಇಅ ಕುಂಪ್ಸಾಪುರ್’ ಕೂಡ ಅರ್ಹತೆಯ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…
ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…
ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…
ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.
ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.