ಮೈಸೂರು: ಸೋಮವಾರ ನಟ ದರ್ಶನ್ ಜತೆ ಕಾರು ಅಪಘಾತದಲ್ಲಿ ಗಾಯಗೊಂಡ ನಟ ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ರಾಯ್ ಅಂಥೋಣಿಯಂ ಅವರು ಗುಣಮುಖರಾಗುತ್ತಿದ್ದು ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ಮಂಗಳವಾರ ಮಧ್ಯಾಹ್ನ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನೂ ದರ್ಶನ್ ಕೈಗೆ ಶಸ್ತ್ರ ಚಿಕಿತ್ಸೆ ನಡೆದಿದ್ದು ಇನ್ನು ಒಂದು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು ಬುಧವಾರ ಸಂಜೆ ವೇಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಮೈಸೂರು ಹೊರವಲಯದ ರಿಂಗ್ ರೋಡ್ನ ಹಿನಕಲ್ ಬಳಿ ಸೋಮವಾರ ಮುಂಜಾನೆ 3 ಗಂಟೆಗೆ ಅಪಘಾತ ಸಂಭವಿಸಿದ್ದು ಇದರಿಂದ ಕಾರಿನಲ್ಲಿದ್ದ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ರಾಯ್ ಅಂಥೋಣಿಯಂ ಗಾಯಗೊಂಡಿದ್ದರು. ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.