Categories: ಮನರಂಜನೆ

‘ಇಂಗ್ಲಿಷ್ ಬರ್ಪುಜಿ ಬ್ರೋ’ ಚಿತ್ರ ವಿದೇಶದಲ್ಲಿ ಬಿಡುಗಡೆ

ಮಂಗಳೂರು: ಮಂಗಳೂರು – ಪುತ್ತೂರು- ಸುಳ್ಯ – ಬೆಳ್ತಂಗಡಿ- ಮೂಡಬಿದ್ರೆ – ಉಡುಪಿ- ಕುಂದಾಪುರ- ಮಣಿಪಾಲ- ಕಾರ್ಕಾಳ -ಬೆಂಗಳೂರು-ಮೈಸೂರು-ಸಕಲೇಶಪುರ- ಶುಂಠಿಕೊಪ್ಪ- ಹುಬ್ಬಳಿ- ಶಿವಮೊಗ್ಗ-ಕಾಸರಗೊಡ್ ಸೇರಿದಂತೆ ಬಿಡುಗಡೆಗೊಂಡಿರುವ ಎಲ್ಲಾ ಕಡೆಗಳಲ್ಲಿ ಭರ್ಜರಿ ಯಶಸ್ಸನ್ನು ಪಡೆದು ಎಲ್ಲ ಸಿನಿಮಾ ಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ “ಇಂಗ್ಲಿಷ್” – ಎಂಕ್ಲೆಗ್ ಬರ್ಪುಜಿ ಬ್ರೋ’ ಗಿಲ್ಬಿಸ್ಟಿಕ್ ಕಾಮಿಡಿ ಚಿತ್ರ ಇದಾಗಿದೆ. ಈ ಸಿನಿಮಾ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಏಪ್ರಿಲ್ 15ರಂದು ಓಮನ್ ಹಾಗೂ ಯುಎಇ ( UAE ) ರಾಷ್ಟ್ರಗಳಲ್ಲಿ ತೆರೆ ಕಾಣಲಿದೆ.

ಅಕ್ಮೆ(ACME ) ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ನಿರ್ಮಾಣವಾಗಿರುವ ದುಬೈಯ ಖ್ಯಾತ ಉದ್ಯಮಿ, ಕನ್ನಡ ಸಿನಿಮಾ ನಿರ್ಮಾಪಕರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ.ಸೂರಜ್ ಶೆಟ್ಟಿ ನಿರ್ದೇಶನದ ತುಳು‌ ಚಿತ್ರರಂಗದ ಬಹುನಿರೀಕ್ಷೆಯ ಕಾಮಿಡಿ ಚಿತ್ರ “ಇಂಗ್ಲೀಷ್” – ಎಂಕ್ಲೆಗ್ ಬರ್ಪುಜಿ ಬ್ರೋ’ ಮಾರ್ಚ್ 26ರಂದು ಶುಕ್ರವಾರ ಕರ್ನಾಟಕದಾದ್ಯಂತ 26 ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ಬಿಡುಗಡೆಗೊಂಡಿತು.

ಉತ್ತಮ ಹಾಸ್ಯ, ಉತ್ತಮ ಸಂದೇಶ, ನವೀರಾದ ಪ್ರೇಮ ಪ್ರಣಯ, ಪ್ರೀತಿಗೆ ಇಂಗ್ಲೀಷ್ ವ್ಯಾಮೋಹ ಅಡ್ಡಿ ಹಾಗೂ ಕೌಟುಂಬಿಕ ಸಮಸ್ಯೆಗಳ ಹಿನ್ನೆಲೆ, ಕೊನೆಗೆ ಪ್ರೇತಗಳಿಗೆ ಮದುವೆ ಮಾಡುವ ಜಂಜಾಟದ ಮೂಲಕ ಇಡೀ ಚಿತ್ರ ಪ್ರೇಕ್ಷಕರನ್ನು ಉಸಿರು ಬಿಗಿ ಹಿಡಿದು ಕುಳಿತುಕೊಳ್ಳುವಂತೆ ಮಾಡುತ್ತದೆ. ಜೊತೆಗೆ ಸುಮಧುರವಾರ ಹಾಡುಗಳು ಸಿನಿ ಪ್ರೀಯರಿಗೆ ಮುದ ನೀಡುತ್ತದೆ.

ಈ ಎಲ್ಲಾ ವಿಭಿನ್ನ, ವಿಶೇಷ, ವಿಚಿತ್ರಗಳ ಮೂಲಕ, ಅದ್ಭುತ ಯಶಸ್ಸಿನೊಂದಿಗೆ ಎರಡನೇ ವಾರಕ್ಕೆ ಕಾಲಿಟ್ಟಿರುವ “ಇಂಗ್ಲೀಷ್” – ಎಂಕ್ಲೆಗ್ ಬರ್ಪುಜಿ ಬ್ರೋ’ ತುಳು ಚಿತ್ರ ಏಪ್ರಿಲ್ 15ರಂದು ಓಮನ್ ಹಾಗೂ ಯು ಎ ಇ ( UAE ) ರಾಷ್ಟ್ರಗಳಲ್ಲಿ ತೆರೆ ಕಾಣುವ ಮೂಲಕ ತುಳು ಚಿತ್ರರಂಗ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸುತ್ತಿದೆ.

ಹಾಸ್ಯವೇ ಪ್ರಧಾನವಾಗಿರುವ ಈ ಚಿತ್ರದಲ್ಲಿ ಬರುವ ವಿವಿಧ ಸನ್ನಿವೇಶಗಳು, ಚಿತ್ರ ಕಥೆ, ಸಂಭಾಷಣೆ, ಒಂದಕ್ಕಿಂತ ಒಂದು ಹಿಟ್ ಹಾಡುಗಳು ಒಟ್ಟಾರೆ ಸಿನೆಮಾದ ಗೆಲುವಿಗೆ ಸ್ಪೂರ್ತಿಯಾಗಿವೆ. ಇದೇ ಮೊದಲ ಬಾರಿಗೆ ಕನ್ನಡದ ಮೇರು ನಟ ಅನಂತ್ ನಾಗ್ ವಿಶೇಷ ಪಾತ್ರದಲ್ಲಿ ನಟಿಸಿದ್ದು, “ಇಂಗ್ಲಿಷ್” – ಎಂಕ್ಲೆಗ್ ಬರ್ಪುಜಿ Bro’ ಸಿನೆಮಾ ಮೂಲಕ ತುಳು ಚಿತ್ರರಂಗಕ್ಕೆ ಅವರ ಮೊದಲ ಎಂಟ್ರಿ ಆಗಿದೆ.

“ಇಂಗ್ಲಿಷ್” – ಎಂಕ್ಲೆಗ್ ಬರ್ಪುಜಿ Bro’ ಸಿನೆಮಾದಲ್ಲಿ ತುಳು ಸಿನೆಮಾರಂಗದ ಹಾಸ್ಯಾದಿಗ್ಗಜರ ದಂಡೇ ಇದೆ. ಚಿತ್ರದಲ್ಲಿ ತುಳು ರಂಗಭೂಮಿಯ ಖ್ಯಾತ ಹಾಸ್ಯ ನಟರಾದ ಅರವಿಂದ್ ಬೋಳಾರ್, ನವೀನ ಡಿ’ಪಡೀಲ್, ಭೋಜರಾಜ್ ವಾಮಂಜೂರ್, ವಿಸ್ಮಯ್ ವಿನಾಯಕ್, ದೀಪಕ್ ರೈ, ನಾಯಕ- ನಟನಾಗಿ “ದಿಯಾ” ಖ್ಯಾತಿಯ ಪೃಥ್ವಿ ಅಂಬರ್ ನಾಯಕಿ ನಟಿ ನವ್ಯ ಪೂಜಾರಿ ನಟಿಸಿದ್ದು, ಇವರ ನಟನೆ ಎಲ್ಲರಿಗೂ ಖುಷಿಕೊಡುತ್ತೆ.

Desk

Recent Posts

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 mins ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

32 mins ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

46 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

1 hour ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

2 hours ago