News Karnataka Kannada
Thursday, May 09 2024
ಮನರಂಜನೆ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಬೂದಾಳ್ ಕೃಷ್ಣಮೂರ್ತಿ ಇನ್ನಿಲ್ಲ

Photo Credit :

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಬೂದಾಳ್ ಕೃಷ್ಣಮೂರ್ತಿ ಇನ್ನಿಲ್ಲ

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ದೇಶಕ ಹಾಗೂ ನಟ ಬೂದಾಳ್ ಕೃಷ್ಣಮೂರ್ತಿ ಅನಾರೋಗ್ಯದ ಕಾರಣದಿಂದ ಶನಿವಾರ ಬೆಳಗ್ಗೆ ನಿಧನರಾದರು.

1949 ರಲ್ಲಿ ಚಿತ್ರದುರ್ಗದಲ್ಲಿ ಜನಿಸಿದ ಬೂದಾಳ್ ಕೃಷ್ಣಮೂರ್ತಿ, ಬೂತಯ್ಯನ ಮಗ ಅಯ್ಯಾ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟಿದ್ದರು. ಆನಂತರ, ‘ಎರಡು ದಂಡೆಯ ಮೇಲೆ’, ‘ಒಲವಿನ ಕಾಣಿಕೆ’, ‘ಸೀತಾಂಜನೇಯ’, ‘ಶುಭಲಗ್ನ’, ‘ಲಂಚ ಸಾಮ್ರಾಜ್ಯ’ ಸೇರಿದಂತೆ ಮುಂತಾದ ಚಿತ್ರಗಳನ್ನು ಬೂದಾಳ್ ನಿರ್ದೇಶಿಸಿದ್ದರು.

ಇಷ್ಟ ಅಲ್ಲದೆ ‘ಪ್ರೊಫೆಸರ್’, ‘ಶ್ರೀಗಂಧ’, ‘ಅರಿಶಿನ ಕುಂಕುಮ’, ‘ಬಲ್ ನನ್ಮಗ’, ‘ಪ್ರಜಾಶಕ್ತಿ’, ‘ನಿರ್ಣಯ’, ‘ಆರ್ಯಭಟ’ ಮುಂತಾದ ಚಿತ್ರಗಳಲ್ಲಿ ಬೂದಾಳ್ ಕೃಷ್ಣಮೂರ್ತಿ ನಟಿಸಿದ್ದರು.

72 ವರ್ಷದ ಬೂದಾಳ್ ಕೃಷ್ಣಮೂರ್ತಿ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ವರದಿಗಳು ತಿಳಿಸುತ್ತವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು