ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ನಟ ರಜಿನಿಕಾಂತ್ ಪದೇ ಪದೇ ಕರ್ನಾಟಕದ ವಿರುದ್ಧ ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೀಗಾಗಿ, ಜೂನ್ 7ರಂದು ತೆರೆಗೆ ಬರಲಿರುವ ಅವರ ಅಭಿನಯದ ತಮಿಳಿನ ‘ಕಾಳಾ ಕರಿಕಾಳನ್’ ಚಿತ್ರಕ್ಕೆ ರಾಜ್ಯದಲ್ಲಿ ನಿರ್ಬಂಧ ಹೇರುವ ಭೀತಿ ಎದುರಾಗಿದೆ.
ಕರ್ನಾಟಕಕ್ಕೆ ಮಾರಕವಾಗಿರುವ ಕಾವೇರಿ ನಿರ್ವಹಣಾ ಮಂಡಳಿಯ ರಚನೆಗೆ ಪಟ್ಟು ಹಿಡಿದಿರುವ ಅವರಿಗೆ ಕರ್ನಾಟಕದಲ್ಲಿನ ಪರಿಸ್ಥಿತಿ ಅರ್ಥವಾಗದೆ ಇರುವುದು ನೋವಿನ ಸಂಗತಿಯಾಗಿದೆ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಜಿನಿಕಾಂತ್ ಹೇಳಿಕೆಗೆ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನಾಗರಾಜ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಅಭಿನಯಿಸಿದ ಚಿತ್ರ ಕರ್ನಾಟಕದಲ್ಲಿ ತೆರೆ ಕಾಣದಂತೆ ಕರ್ನಾಟಕ ಚಲನಚಿತ್ರ ಮಂಡಳಿಗೆ ದೂರು ನೀಡುವುದಾಗಿ ತಿಳಿಸಿದ್ದು. ಒಂದು ವೇಳೆ ಕಾಳಾ ಚಿತ್ರ ತೆರೆಕಂಡರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ. ಹಾಗೆಯೇ ಕಮಲ್ ಹಾಸನ್ರವರ ಚಿತ್ರವು ಕೂಡ ತೆರೆಕಾಣಬಾರದೆಂದು ಹೇಳಿಕೆ ನೀಡಿದ್ದಾರೆ.+