ಮೈಸೂರು: ಮೈಸೂರಿನ ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಸಚಿವ ಬಿಸಿ ಪಾಟೀಲ್ ಅವರು ದರ್ಶನ್ ಅವರನ್ನು ಭೇಟಿಯಾಗಿ ಕೃಷಿ ಇಲಾಖೆಯ ರಾಯಭಾರಿ ಯಾಗುವಂತೆ ಕೋರಿಕೊಂಡಾಗ ಮರುಮಾತನಾಡದೆ ಒಪ್ಪಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಚಿವರು, ದರ್ಶನ್ ಅವರನ್ನು ಭೇಟಿಯಾಗಿ ಕೆಲಹೊತ್ತು ಕೃಷಿ ಇಲಾಖೆಯ ರಾಯಭಾರಿ ಆಗುವಂತೆ ಮನವಿ ಮಾಡಿದೆವು. ಇಂತಹ ಮನವಿಗೆ ಪ್ರತಿಕ್ರಿಯಿಸಿದ ನಟ ದರ್ಶನ್ ಯಾವುದೇ ಸಂಭಾವನೆ ಇಲ್ಲದೆ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಈ ಮೂಲಕ ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿ ಯಾವುದೇ ಸಂಭಾವನೆ ಇಲ್ಲದೆ ಕಾರ್ಯನಿರ್ವಹಿಸಲಿದ್ದಾರೆ.