News Karnataka Kannada
Sunday, May 19 2024
ಮನರಂಜನೆ

ಕೊನೆಯುಸಿರೆಳೆದ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬುದ್ಧದೇಬ್ ದಾಸ್ ಗುಪ್ತಾ

Photo Credit :

ಕೊನೆಯುಸಿರೆಳೆದ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬುದ್ಧದೇಬ್ ದಾಸ್ ಗುಪ್ತಾ

ಕೊಲ್ಕತ್ತಾ : ಕೊನೆಯುಸಿರೆಳೆದ ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ನಿರ್ದೇಶಕ ಬುದ್ಧದೇಬ್ ದಾಸ್ ಗುಪ್ತಾ ಅವರು ನಿಧನಹೊಂದಿದ್ದಾರೆ . ಕಳೆದ ಹಲವು ತಿಂಗಳಿನಿಂದ ಬುದ್ಧದೇಬ್ ದಾಸ್ ಗುಪ್ತಾ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ವರದಿಗಳು ತಿಳಿಸಿವೆ. 

 

ಬಾಗ ಬಹದೂರ್ , ಚರಾಚರ್ ಆ್ಯಂಡ್ ಉತ್ತರಾ ಸೇರಿದಂತೆ ಹಲವು ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಸಿನೆಮಾ ನಿರ್ದೇಶನದಲ್ಲಿ ಅವರು ತಮ್ಮದೇ ಆದ ಛಾಪು ಮೂಡಿಸಿದ್ದರು . ಕೆಲವು ದಿನಗಳಿಂದ ಕೊಲ್ಕತ್ತಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಅಸುನೀಗಿದ್ದಾರೆ.  

 

ಬುದ್ಧದೇಬ್ ದಾಸ್ ಗುಪ್ತಾ ನಿಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ . 

 

 ಪ್ರಧಾನಿ ನರೇಂದ್ರ ಮೋದಿ ಅವರ ಸಾವಿನ ಕುರಿತು ಸಂತಾಪ ವ್ಯಕ್ತಪಡಿಸಿದ್ದು, ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ”ಶ್ರೀ ಬುದ್ಧದೇಬ್ ದಾಸ್‌ಗುಪ್ತಾ ಅವರ ನಿಧನದಿಂದ ದುಃಖವಾಗಿದೆ. ಅವರ ವೈವಿಧ್ಯಮಯ ಕೃತಿಗಳು ಸಮಾಜದ ಎಲ್ಲಾ ವರ್ಗಗಳ ಜೊತೆಗೂಡಿವೆ. ಅವರು ಪ್ರಖ್ಯಾತ ಚಿಂತಕರಾಗಿದ್ದರು ಮತ್ತು ಕವಿ. ದುಃಖದ ಈ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಹಲವಾರು ಅಭಿಮಾನಿಗಳೊಂದಿಗೆ ಇವೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು