Categories: ಮನರಂಜನೆ

ಕೊಮ್ಮೇರಹಳ್ಳಿಯಲ್ಲಿ ಅಡ್ಡದಾರಿ ಸಿನಿಮಾಗೆ ಮುಹೂರ್ತ

ಮಂಡ್ಯ: ತಾಲೂಕಿನ ಕೊಮ್ಮೇರಹಳ್ಳಿ ವಿಶ್ವಮಾನವ ಕ್ಷೇತ್ರದ ಶ್ರೀ ಕಂಬದ ನರಸಿಂಹಸ್ವಾಮಿ ಸ್ವಾಮಿ ದೇವಾಲಯದ ಆವರಣದಲ್ಲಿ ಸಾಮಾಜಿಕ ಜವಾಬ್ದಾರಿ ನಿರ್ಮಿತ ಅಡ್ಡದಾರಿ ಚಲನಚಿತ್ರ ಮುಹೂರ್ತ ಕ್ಯಾಮರ ಪೂಜೆ ಮಾಡುವ ಮುಖಾಂತರ ಕೆಎಂಎಫ್ ನಿರ್ದೇಶಕ ಮಹೇಶ್ ಚಾಲನೆ ನೀಡಿದರು.

ಮಂಡ್ಯ ಜಿಲ್ಲೆ ಕಿರುತೆರೆ ಕಲಾವಿದರ ಸಂಘದ ಅಧ್ಯಕ್ಷ, ವಕೀಲ ಎಂ. ಗುರು ಪ್ರಸಾದ್ ಮಾತನಾಡಿ, ಚಲನಚಿತ್ರ ಶೀರ್ಷಿಕೆ ಅಡ್ಡದಾರಿ ಆಗಿದ್ದು, ಸಮಾಜದಲ್ಲಿ ಅಡ್ಡದಾರಿಗೆ ಹೋಗುವವರನ್ನು ಸರಿದಾರಿಗೆ ತರುವ ಚಿತ್ರಕತೆ ಇದಾಗಿದ್ದು, ಪ್ರತಿಯೊಂದು ಮನೆಯಲ್ಲೂ ಯುವಕ-ಯುವತಿಯರಿಗೆ ಸಮಾಜದ ಜವಾಬ್ದಾರಿಗಳನ್ನು ಹರಿಯುವ ಹಾಗೂ ಭವ್ಯ ಭಾರತ ನಿರ್ಮಾಣ ಮಾಡುವ ಉದ್ದೇಶದ ಚಿತ್ರವಾಗಿದ್ದು, ಪ್ರತಿಯೊಬ್ಬ ಮನುಷ್ಯನು ಚಲನ ಚಿತ್ರದಲ್ಲಿ ಬರುವ ಆಯ್ದ ಭಾಗಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

ಈ ಚಲನಚಿತ್ರದಲ್ಲಿ ಮಂಡ್ಯ ಜಿಲ್ಲೆಯ ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶ ನೀಡಿದ್ದು, ಜಿಲ್ಲೆಯ ಕಲಾವಿದರ ಪ್ರೋತ್ಸಾಹಿಸುವ ಕೆಲಸವನ್ನು ನಿರ್ದೇಶಕ-ನಿರ್ಮಾಪಕ ಆರ್ಯವರ್ಧನ್ ಅವರು ಮಾಡುತ್ತಿದ್ದಾರೆ ಎಂದರು.

ಈ ಚಲನಚಿತ್ರ ಕುಟುಂಬದ ಎಲ್ಲಾ ಸದಸ್ಯರು ನೋಡುವಂತಹ ಚಲನಚಿತ್ರವಾಗಿದೆ. ತೆರೆಯ ಮೇಲೆ ಬರುವ ದೃಶ್ಯ ಮತ್ತು ಸಂಗೀತವನ್ನು ಮೈಗೂಡಿಸಿ ಕೊಂಡು ಪ್ರತಿಯೊಬ್ಬರು ಸಮಾಜಮುಖಿಯಾಗಿ ಬದಲಾವಣೆ ಆಗುವಂತ ಕಥೆಯಾಗಿದ್ದು ಜಿಲ್ಲೆಯ ಜನತೆ ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಮಾಜಸೇವಕ ವಕೀಲ ಶ್ರೀಕಾಂತ, ಚಲನಚಿತ್ರ ಮುಖ್ಯಸ್ಥರಾದ ಸ್ವಾಮಿ, ಸಮಾಜಸೇವಕಿ ವೈ.ಎಚ್. ರತ್ನಮ್ಮ, ಶೈಲಜಾ ಶಿವಕುಮಾರ, ಅರುಣಾ ಜ್ಯೋತಿ, ಡಾ.ಬಿ.ಯೋಗೇಶ್, ಎಚ್.ಪಿ. ಪ್ರವೀಣ, ವೆಂಕಟೇಶ್, ನಟರಾಜು, ಎಸ್.ಪಿ.ನಾರಾಯಣಸ್ವಾಮಿ ಮಂಜುಳಾ ರಮೇಶ್ ದ್ರಾಕ್ಷಾಯಿಣಿ ಸೇರಿದಂತೆ ಅನೇಕ ನಟ ನಟಿಯರು, ಚಲನಚಿತ್ರ ಛಾಯಾಗ್ರಾಹಕರು, ಸಹಾಯಕರು ಹಾಜರಿದ್ದರು.

Desk

Recent Posts

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

8 mins ago

ನಟಿ ಮಾಳವಿಕಾ ಅವಿನಾಶ್ ತಂದೆ ನಟೇಶನ್ ಗಣೇಶನ್ ನಿಧನ

ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.

17 mins ago

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

33 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

39 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

58 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

1 hour ago