ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಗಿಚ್ಚಿ ಗಿಲಿಗಿಲಿ” ರಿಯಾಲಿಟಿ ಶೋ ಕಿರುತೆರೆ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ದಾಪುಗಾಲು ಇಡುತ್ತಿದೆ. ಈ ಕಾರ್ಯಕ್ರಮದ ನಿರೂಪಣೆ ಹೊತ್ತವರು ಬಿಗ್ ಬಾಸ್ ವಿನ್ನರ್ ಮಂಜು ಮತ್ತು ಸ್ಪೋರ್ಟ್ಸ್ ಆಯಂಕರ್ ರೀನಾ ಡಿಸೋಜಾ.
ಸಾಕಷ್ಟು ಮನರಂಜನೆ ನೀಡುತ್ತಿರುವ ಈ ಶೋನಿಂದ ಈಗ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಈ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ರೀನಾ ಡಿಸೋಜಾ ಮತ್ತು ಮಂಜು ಶೋನಿಂದ ಹೊರನಡಿದ್ದಾರೆ.
ಈ ರಿಯಾಲಿಟಿ ಶೋ ಪ್ರಾರಂಭ ಆದಾಗಿಂದ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟುಹಾಕಿತ್ತು. ಅಲ್ಲದೇ ರೀನಾ ಮತ್ತು ಮಂಜು ಇಬ್ಬರು ನಿರೂಪಣೆ ಜವಾಬ್ದಾರಿ ವಹಿಸಿಕೊಂಡಿರುವುದರಿಂದ ಅಭಿಮಾನಿಗಳು ಇವರಿಂದ ಭಾರೀ ಮನರಂಜನೆ ನಿರೀಕ್ಷೆ ಮಾಡಿದ್ದರು. ಆದರೀಗ ಶೋ ಅರ್ಧದಲ್ಲಿಯೇ ಇಬ್ಬರೂ ಹೊರ ನಡೆದಿದ್ದಾರೆ. ಅಂದಹಾಗೆ ಇವರಿಬ್ಬರ ಜಾಗಕ್ಕೆ ಮತ್ತೋರ್ವ ನಿರೂಪಕ ಎಂಟ್ರಿ ಕೊಟ್ಟಿದ್ದಾರೆ. ಅದು ಮತ್ಯಾರು ಅಲ್ಲ ನಿರಂಜನ್ ದೇಶಪಾಂಡೆ. ನಿರಂಜನ್ ಇನ್ಮುಂದೆ ಈ ಶೋ ನಡೆಸಿಕೊಡಲಿದ್ದಾರೆ.
ಈಗಾಗಲೇ ಹೊಸ ಪ್ರೋಮೋ ಬಿಡುಗಡೆಯಾಗಿದ್ದು ನಿರಂಜನ್ ಅದ್ಭುತವಾಗಿ ನಿರೂಪಣೆ ಮಾಡಿದ್ದಾರೆ. ಅಂದಹಾಗೆ ಇದೇ ಶೋನಲ್ಲಿ ನಿರಂಜನ್ ಪತ್ನಿ ಯಶಸ್ವಿನಿ ಸ್ಪರ್ಧಿಯಾಗಿ ಭಾಗಿಯಾಗಿದ್ದಾರೆ. ಸದ್ಯ ಬದಲಾದ ನಿರೂಪಕರಿಂದ ಮತ್ತಷ್ಟು ಮನರಂಜನೆಯ ನಿರೀಕ್ಷೆಯಲ್ಲಿದ್ದಾರೆ ಪ್ರೇಕ್ಷಕರು. ಅಂದಹಾಗೆ ಖ್ಯಾತ ನಿರೂಪಕಿ ರೀನಾ ಡಿಸೋಜಾ ಸ್ಟಾರ್ ಸ್ಪೋರ್ಟ್ ಆಂಕರ್ ಆಗಿದ್ದಾರೆ. ಆಪಾರ ಸಂಖ್ಯೆಯ ಫಾಲೋವರ್ಸ್ ಹೊಂದಿರುವ ರೀನಾ ತನ್ನ ಅದ್ಭುತ ನಿರೂಪಣಾ ಶೈಲಿ ಮೂಲಕ ನೋಡುಗರ ಮನಗೆದ್ದಿದ್ದರು. ಗಿಚ್ಚಿಗಿಲಿಗಿಲಿ ಶೋ ಮೂಲಕ ರೀನಾ ಮೊದಲ ಬಾರಿಗೆ ಮನರಂಜನಾ ವಾಹಿನಿ ಕಡೆ ಮುಖ ಮಾಡಿದ್ದರು.
ಆದರೆ ರೀನಾ ನಿರೂಪಣೆಗೆ ಇಲ್ಲಿ ಹೇಳಿಕೊಳ್ಳುವಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಅಲ್ಲದೆ ಮಂಜು ಪಾವಗಡ ಅವರೇ ಹೆಚ್ಚು ವೇದಿಕೆ ಆಕ್ರಮಿಸಿಕೊಳ್ಳುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿತ್ತು. ಈ ನಡುವೆ ಇಬ್ಬರು ದಿಢೀರ್ ಶೋನಿಂದ ಹೊರ ನಡೆದಿರುವುದು ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿದೆ. ಅಂದಹಾಗೆ ಇಬ್ಬರು ಗಿಚ್ಚಿ ಗಿಲಿಗಿಲಿ ಶೋನಿಂದ ಹೊರ ನಡೆಯಲು ಕಾರಣ ಬೇರೆ ಬೇರೆ ಕಮಿಂಟ್ ಮೆಂಟ್ ಕಾರಣದಿಂದ ಶೋನಿಂದ ಹೊರನಡೆಯಲಾಗಿದೆ ಎನ್ನಲಾಗಿದೆ. ಮಂಜು ಪಾವಗಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇನ್ನು ರೀನಾ ಡಿಸೋಜಾ ಸ್ಟಾರ್ ಸ್ಪೋರ್ಟ್ ನಲ್ಲಿ ಬ್ಯುಸಿಯಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…