Categories: ಮನರಂಜನೆ

ಚಿತ್ರರಂಗದಲ್ಲಿ ಬೆಳೆಯುತ್ತಿದ್ದಂತೆ ನಮ್ಮನ್ನು ಕಡೆಗಣಿಸಿದ್ದಾನೆ, ನಟ ಧನುಷ್ ‘ನಮ್ಮ ಮಗ’ !

ಮಧುರೈ ಮೇಲೂರಿನ ದಂಪತಿ ಆರ್‌.ಕದಿರೇಸನ್‌(60 ವರ್ಷ) ಮತ್ತು ಕೆ.ಮೀನಾಕ್ಷಿ(55ವರ್ಷ) ಅವರು ತಮಿಳು ನಟ ಧನುಷ್‌ ನಮ್ಮ ಮಗ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಹಿನ್ನೆಲೆ ನಟ ಧನುಷ್‌ಗೆ ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್‌ ಜಾರಿ ಮಾಡಿದೆ.

ಮೇಲೂರಿನ ದಂಪತಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಚಿತ್ರರಂಗದಲ್ಲಿ ಬೆಳವಣಿಗೆ ಕಾಣುತ್ತಿದ್ದಂತೆ ನಟ ಧನುಷ್ ನಮ್ಮನ್ನು ಕಡೆಗಣಿಸಿದ್ದಾನೆ ಮತ್ತು ಆತನಿಂದ ತಿಂಗಳಿಗೆ 65,000 ರೂ ನೆರವು ಹಾಗೂ ಮಗನ ಜೊತೆಗಿರುವಂತೆ ಅರ್ಜಿ ಸಲ್ಲಿಸಿದ್ದು ಇದರ ಈ ಹಿನ್ನೆಲೆ 2017ರ ಜನವರಿ 12ರಂದು ಕೋರ್ಟ್‌ಗೆ ಹಾಜರಾಗುವಂತೆ ಅರ್ಜಿ ವಿಚಾರಣೆ ನಡೆಸಿದ ಮೇಲೂರು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
 
ನಟ ಧನುಷ್‌ ತಮ್ಮ ಹಿರಿಯ ಮಗನಾಗಿದ್ದು, ಆತನ ಹೆಸರು ‘ಕಲೈಚೆಲ್ವನ್‌’ ಎಂದು ತಿಳಿಸಿದ ಈ ದಂಪತಿಗಳು ನಟನಾಗಲು ಶಾಲೆ ಬಿಟ್ಟ ಧನುಷ್‌ ಕೆ.ರಾಜಾ ಎಂದು ಹೆಸರು ಬದಲಿಸಿಕೊಂಡು ಚೆನ್ನೈ ಸೇರಿದ್ದ,  11ನೇ ತರಗತಿವರೆಗೂ ಶಿವಗಂಗಾದಲ್ಲಿ ಶಿಕ್ಷಣ ಪಡೆದ ಧನುಷ್, ರಾಜಾಜಿ ಸರ್ಕಾರಿ ಆಸ್ಪತ್ರೆ ಮಧುರೈನಲ್ಲಿ ಜನಿಸಿದ್ದು ಮತ್ತು ನಂತರದ ದಿನಗಳಲ್ಲಿ ಧನುಷ್ ಚೆನ್ನೈಗೆ ಹೋದ ನಂತರ ದಂಪತಿಗಳು ಅವನ ಭೇಟಿಗೆ ಅನೇಕ ಪ್ರಯತ್ನ ಪಟ್ಟಿದ್ದು, ಫಲಕಾರಿಯಾಗಲಿಲ್ಲ, ನಟನಾದ ಮೇಲೆ ನಮ್ಮನ್ನು ಧನುಷ್ ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

Desk

Recent Posts

ಪ್ರಜ್ವಲ್ ಪ್ರಕರಣ ಕಾಂಗ್ರೆಸ್ ನಿಂದ ರಾಜಕೀಯ: ಅರವಿಂದ ಲಿಂಬಾವಳಿ ಆರೋಪ

ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.

9 mins ago

ಬಿಸಿಲಿನ ತಾಪದಿಂದ ಹೊಲದಲ್ಲಿ ಕೆಲಸಕ್ಕೆ ಹೋಗಿದ್ದ ರೈತ ಸಾವು

ಬಿಸಿಲಿನ ತಾಪದಿಂದ ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.

24 mins ago

ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಲಿ: ಮೊಯ್ಲಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ…

31 mins ago

ಬಾಲಕನನ್ನು ಕಚ್ಚಿದ ನಾಯಿಯನ್ನು ಕೊಂದು ತಿಂದ ಭೂಪ

ತನ್ನ ಸೋದರಳಿಯನಿಗೆ ಕಚ್ಚಿದ ಸಾಕುನಾಯಿಯನ್ನು ವ್ಯಕ್ತಿಯೊಬ್ಬ ಕೊಂದು ತಿಂದ ಘಟನೆ ಥೈಲ್ಯಾಂಡಿನಲ್ಲಿ ನಡೆದಿದ್ದು, ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

48 mins ago

ಯೋಗಿ ಆದಿತ್ಯನಾಥ್ ಅವರ ಡೀಪ್‌ಫೇಕ್ ವೀಡಿಯೋ ಶೇರ್ ಮಾಡಿದ ಆರೋಪಿಯ ಬಂಧನ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅವರ ಡೀಪ್‌ಫೇಕ್ ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ ಎಸ್‌ಟಿಎಫ್  ತಂಡ…

1 hour ago

ಉರುಳಿಗೆ ಸಿಲುಕಿದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ

ಉರುಳಿಗೆ ಸಿಲುಕಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ ಸುರಕ್ಷಿತವಾಗಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡು ತೋಪಿನಲ್ಲಿ ನಡೆದಿದೆ.

1 hour ago