ಮನರಂಜನೆ

ದಿ ಕಾಶ್ಮೀರಿ ಫೈಲ್ಸ್ ಚಿತ್ರ ಕನ್ನಡದಲ್ಲಿ ಬರುವ ನಿರೀಕ್ಷೆ!

ದಿ ಕಾಶ್ಮೀರಿ ಫೈಲ್ಸ್ ಚಿತ್ರ ಈಗಾಗಲೇ ತೆರೆಯಲ್ಲಿ ಜನರ ಮನಸ್ಸು ಗೆಲ್ಲುತ್ತಿದ್ದು, ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಾಜಕೀಯ ವಲಯದಲ್ಲೂ ಈ ಸಿನಿಮಾ ದೊಡ್ಡ ಮಟ್ಟದ ಚರ್ಚೆ ಸೃಷ್ಟಿ ಮಾಡಿದೆ.
ಇದೀಗ ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡೋ ಚಿಂತನೆಯಲ್ಲಿ ಬಿಜೆಪಿ ಇದೆ ಎನ್ನಲಾಗುತ್ತಿದೆ. ಹೀಗಾಗಿ ದಿ ಕಾಶ್ಮೀರಿ ಫೈಲ್ಸ್ ಚಿತ್ರದ ಕನ್ನಡದಲ್ಲಿ ಬರುವ ನಿರೀಕ್ಷೆಯಿದೆ.

ಇತ್ತೀಚೆಗೆ ವಿಧಾನಸಭೆ ಹಾಗೂ ಪರಿಷತ್ ಸಚಿವಾಲಯದಿಂದ ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರವನ್ನು ಪ್ರದರ್ಶನ ಮಾಡಲಾಗಿತ್ತು. ಈ ವೇಳೆ ಬಿಜೆಪಿ ನಾಯಕರು ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಈಗ ಈ ಚಿತ್ರವನ್ನು ಜನರ ಮುಂದೆ ಕನ್ನಡದಲ್ಲಿ ಇಡಲು ಚಿಂತನೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಆಪ್ತ ಸಚಿವರ ಜತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಇಂದು ಸ್ವತಹ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಮಾತನಾಡಿದ್ದು, ಈಗ ಹಿಂದಿಯಲ್ಲಿ ಚಿತ್ರ ಬಂದಿದೆ ಯಶಸ್ವಿಯಾಗಿ ಪ್ರದರ್ಶನ ಆಗುತ್ತಿದೆ. ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಿ ತರಬೇಕು ಅಂತ ಯೋಚನೆ ಮಾಡಿದ್ದೇವೆ. ಈ ವಿಚಾರವಾಗಿ ನನ್ನ ಸ್ನೇಹಿತರ ಬಳಿ ಚರ್ಚೆ ಸಹ ಮಾಡಿದ್ದೇನೆ ಎಂದರು.

ಕನ್ನಡದಲ್ಲಿ ಬಂದ್ರೆ ಇಲ್ಲಿನವರು ನೋಡಲು ಅನುಕೂಲವಾಗುತ್ತದೆ. ಏಕೆಂದರೆ ಇಲ್ಲಿ ಎಲ್ಲರಿಗೂ ಹಿಂದಿ ಬರಲ್ಲ. ದಿ ಕಾಶ್ಮೀರ್ ಪೈಲ್ಸ ಒಂದು ಉತ್ತಮವಾದ ಚಿತ್ರವಾಗಿದೆ. ಪಂಡಿತರ ಮೇಲೆ ನಡೆದಿದ್ದ ದೌರ್ಜನ್ಯ ಎಲ್ಲರಿಗೂ ತಿಳಿಬೇಕು. ಈ ಹಿನ್ನೆಲೆಯಲ್ಲಿ ಕನ್ನಡದಲ್ಲಿ ಡಬ್ ಮಾಡಿ ತರಲು ಯೋಚನೆ ಮಾಡ್ತಾ ಇದ್ದೇವೆ ಎಂದು ತಿಳಿಸಿದರು.

ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಈ ವಿಚಾರಕ್ಕೆ ಧ್ವನಿಗೂಡಿಸಿದ್ದಾರೆ. ‘ಈಗ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಹಿಂದಿಯಲ್ಲಿ ಬಿಡುಗಡೆ ಆಗಿದೆ. ಈ ಚಿತ್ರ ಕನ್ನಡಕ್ಕೂ ಡಬ್​ ಆಗಿ ತೆರೆಕಾಣಬೇಕು. ಕನ್ನಡದಲ್ಲಿ ಬಂದರೆ ಹಿಂದಿ ಬಾರದವರಿಗೂ ಸಿನಿಮಾ ಅರ್ಥ ಆಗುತ್ತದೆ’ ಎಂದಿದ್ದಾರೆ ಅವರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

6 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago