ಬೆಂಗಳೂರು: ನಟ ಜಗ್ಗೇಶ ಅವರ ಹಿರಿಯ ಪುತ್ರ ಗುರುರಾಜ್ ಮೇಲೆ ಆರ್ ಟಿ ನಗರದಲ್ಲಿ ದುಷ್ಕರ್ಮಿಗಳು ಇಂದು ಬೆಳಗ್ಗೆ ದಾಳಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.ಇಂದು ಬೆಳಿಗ್ಗೆ 9 ಗಂಟೆಗೆ ಗುರುರಾಜ್ ತಮ್ಮ ಮಗನನ್ನು ಶಾಲೆಗೆ ಬಿಡಲು ಹೋದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಸ್ತೆಯಲ್ಲಿ ಟ್ರಾಫಿಕ್ ವಿಚಾರವಾಗಿ ಗಲಾಟೆ ನಡೆದಿದ್ದು, ಮಾತಿಗೆ ಮಾತು ಬೆಳೆದರಿಂದ ಜಗಳ ವಿಕೋಪಕ್ಕೆ ತಿರುಗಿ, ದುಷ್ಕರ್ಮಿಗಳು ಗುರುರಾಜ್ಗೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ದಾಳಿಯಿಂದ ಗುರುರಾಜ್ ಕಾಲಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಈ ಸಂಬಂಧ ನಟ ಜಗ್ಗೇಶ್ ಆರ್. ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಘಟನೆ ಯಾವುದೇ ವಯಕ್ತಿಕ ಕಾರಣಕ್ಕೆ ನಡೆದಿಲ್ಲ ಎಂದು ಪೊಲೀಸರಿಗೆ ನಟ ಜಗ್ಗೇಶ್ ಸ್ಪಷ್ಟನೆ ನೀಡಿದ್ದಾರೆ